ಮಣಿಪಾಲದ ಕೆಎಂಸಿಯಲ್ಲಿ ಜೂ. 21ರಿಂದ ಎಲ್ಲ ಸೇವೆ ಸಾರ್ವಜನಿಕರಿಗೆ ಮುಕ್ತ

ಮಣಿಪಾಲ: ಕೆಎಂಸಿ ಆಸ್ಪತ್ರೆಯ ಎಲ್ಲ ವಿಭಾಗಗಳು ಜೂ. 21ರಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಎಲ್ಲಾ ಹೊರರೋಗಿ ಮತ್ತು ಒಳರೋಗಿ ವಿಭಾಗ, ನಾನ್ ಓಪಿಡಿ ವಿಶೇಷ ಸೇವೆ ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲಾ ವಿಭಾಗಗಳು ಕಾರ್ಯಾರಂಭಿಸಲಿವೆ. ಹೊರರೋಗಿ ವಿಭಾಗ ಬೆಳಿಗ್ಗೆ 8ರಿಂದ ಸಂಜೆ 5ರ ವರೆಗೆ ಲಭ್ಯ.ಎಲ್ಲ ರೀತಿಯ ಶಸ್ತ್ರಚಿಕಿತ್ಸಾ ಸೌಲಭ್ಯ ದೊರೆಯಲಿದೆ.

ಆದರೆ, ಯಾವುದೇ ಶಸ್ತ್ರಚಿಕಿತ್ಸೆಗೆ ಒಳರೋಗಿಯಾಗಿ ದಾಖಲಾಗಲು ಕೋವಿಡ್ 19 ಪರೀಕ್ಷೆ ಕಡ್ಡಾಯ.ಒಂದು ವೇಳೆ ತಮ್ಮ ಊರಿನಲ್ಲಿ ಪರೀಕ್ಷೆ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಗಂಟೆ ವರೆಗೆ ಮಾತ್ರ ಅದು ಊರ್ಜಿತವಾಗಿರುತ್ತದೆ. ಇಲ್ಲವಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳರೋಗಿಯಾಗಿ ದಾಖಲಾಗುವ ಮೊದಲು ಕಡ್ಡಾಯವಾಗಿ ಕೊರೊನಾ ಪರೀಕ್ಷೆ ಮಾಡಲಾಗುವುದು ಎಂದು ಡಾ. ಅವಿನಾಶ್ ತಿಳಿಸಿದ್ದಾರೆ.

ಕೊರೋನಾ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳೂ ಸೇರಿದಂತೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಬೇಕು. ಪ್ರತೀ ರೋಗಿಯೊಂದಿಗೆ ಒಬ್ಬರು ಸಹಾಯಕರಿಗೆ ಮಾತ್ರ ಅವಕಾಶ ಎಂದು ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply