ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೆಡಿಕಲ್ ಕಿಟ್ ಹಸ್ತಾಂತರ

ಬೈಂದೂರು: ಸಮುದಾಯ ಅರೋಗ್ಯ ಕೇಂದ್ರಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಭೇಟಿ ನೀಡಿದರು. ಈ ವೇಳೆ ಬಿಜೆಪಿ ಮುಖಂಡ ಬಿ.ಎಸ್. ಸುರೇಶ್ ಶೆಟ್ಟಿ ಮತ್ತು ಪಾಂಡುರಂಗ ಪಡಿಯಾರ್ ತಮ್ಮ ಸಂಸ್ಥೆ ಸುಮುಖ ಸರ್ಜಿಕಲ್ಸ್ ವತಿಯಿಂದ ಕೊಡಮಾಡಿದ ಸುಮಾರು ರೂ.1.50 ಲಕ್ಷ ಮೌಲ್ಯದ ಪಿಪಿಇ ಕಿಟ್, ಫೇಸ್ ಶೀಲ್ಡ್, ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಆಕ್ಸೀ ಮೀಟರ್, ವಿಟಮಿನ್ ಮಾತ್ರೆಗಳು ಮತ್ತಿತರ ವೈದ್ಯಕೀಯ ಪರಿಕರಗಳನ್ನು ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಂದಿನಿ ಗೆ ಹಸ್ತಾಂತರಿಸಲಾಯಿತು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು,ಮನೋಹರ್ ಎಸ್. ಕಲ್ಮಾಡಿ,ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ,ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಅತ್ರಾಡಿ,ಪಕ್ಷದ ಪ್ರಮುಖ ಬಿ.ಎಸ್. ಸುರೇಶ್ ಶೆಟ್ಟಿ, ಪಾಂಡುರಂಗ ಪಡಿಯಾರ್, ಜಿ.ಪಂ. ಸದಸ್ಯ ಸುರೇಶ್ ಬಟಾವಾಡಿ,ಜಗನ್ನಾಥ್,ನಾಗರಾಜ್ ಖಾರ್ವಿ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply