ಮುನಿಯಾಲ್ ಆಯುರ್ವೇದ ಕಾಲೇಜು: ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ಕಳೆದ ಇಪ್ಪತೈದು ವರ್ಷಗಳಿಂದ ವೈದ್ಯಕೀಯ ರಂಗದಲ್ಲಿ ಸಾವಿರಾರು ರೋಗಿಗಳಿಗೆ ಪ್ರಾಚೀನ ಆಯುರ್ವೇದ ಶಾಸ್ತ್ರದಿಂದ ಸೇವೆ ಸಲ್ಲಿಸಿ ಆಶಾಕಿರಣವಾಗಿದೆ.

ಇದೇ ನಿಟ್ಟಿನಲ್ಲಿ ತನ್ನ ರಜತ ಮಹೋತ್ಸವದ ಸಂಭ್ರಮದ ಅಂಗವಾಗಿ
ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ 2023ನೇ ಮಾರ್ಚ್ 1 ರಿಂದ 7ನೇ ತಾರೀಕಿನವರೆಗೆ ಬೆಳಿಗ್ಗೆ 9 ರಿಂದ ಅಪರಾಹ್ನ 4
ರವರೆಗೆ ನೋವು ನಿವಾರಕ ಆರೋಗ್ಯ ಚಿಕಿತ್ಸಾ ಶಿಬಿರ-‘ವೇದನಾಹರ ಕಲ್ಪ’
ವನ್ನು ಕಾಯಚಿಕಿತ್ಸಾ ವಿಭಾಗದಿಂದ ಆಯೋಜಿಸಲಾಗಿದೆ.ಈ ಶಿಬಿರದಲ್ಲಿ ಉಚಿತ
ತಪಾಸಣಾ ಹಾಗೂ ರಿಯಾಯಿತಿ ದರದಲ್ಲಿ ಚಿಕಿತ್ಸೆಯು ಲಭ್ಯವಿದ್ದು
ಮಾಂಸಖoಡದ ನೋವು ಮತ್ತು ಸೆಳೆತ, ಸ್ನಾಯುಗಳ ಸೆಳೆತ,
ಎಲ್ಲಾ ತರಹದ ಗಂಟುನೋವು, ಸೊಂಟ,ಬೆನ್ನು, ಕುತ್ತಿಗೆ, ಭುಜ,
ಮಂಡಿನೋವು ಇತ್ಯಾದಿ ಸಮಸ್ಯೆಯಿಂದ ಬಳಲುತ್ತಿರುವ ಸಾರ್ವಜನಿಕರು
ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು
ಸoಸ್ಥೆಯ ಪ್ರಕಟಣೆ ತಿಳಿಸಿದೆ. ಶಿಬಿರದ ಹೆಚ್ಚಿನ ಮಾಹಿತಿಗಾಗಿ 8123403233
ಸಂಪರ್ಕಿಸಿ.

 
 
 
 
 
 
 
 
 
 
 

Leave a Reply