ಕೊಡವೂರಿನಲ್ಲಿ ಉಚಿತ ನೇತ್ರ ತಪಾಸಣೆ, ನೇತ್ರ ಪೊರೆ ಚಿಕಿತ್ಸೆ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.

ಉಡುಪಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಕೊಡವೂರು, ಬ್ರಾಹ್ಮಣ ವಲಯ ಸಮಿತಿ ಕೊಡವೂರು ಗೆಳೆಯರ ಬಳಗ (ರಿ.) ಗರ್ಡೆ, ಲಕ್ಷ್ಮೀನಗರ ಇವರ ಸಹಯೋಗದೊಂದಿಗೆ ಪ್ರಸಾದ್ ನೇತ್ರಾಲಯ ಸಹಭಾಗಿತ್ವದಲ್ಲಿ, ನಗರಸಭಾ ಸದಸ್ಯ ವಿಜಯ್ ಕೊಡವೂರು ​ನೇತೃತ್ವದಲ್ಲಿ ​ವಿಪ್ರಶ್ರೀ ಸಭಾಭವನದಲ್ಲಿ ನೇತ್ರ ತಪಾಸಣೆ ಉಚಿತ ಶಿಬಿರ, ನೇತ್ರ ಪೊರೆ ಚಿಕಿತ್ಸೆ ಮತ್ತು ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.
ಶಾಸಕ ಶ್ರೀ ಕೆ. ರಘುಪತಿ ಭಟ್ ಭಾಗವಹಿಸಿ ಶಿಬಿರ ಉದ್ಘಾಟಿಸಿದರು.  ಪ್ರಸಾದ್ ನೇತ್ರಾಲಯದ  ವೈದ್ಯ ಡಾll ಕೃಷ್ಣ ಪ್ರಸಾದ್ ಅವರನ್ನು ಅಭಿನಂದಿಸಲಾಯಿತು
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕೊಡವೂರು ವಾರ್ಡ್ ನಗರಸಭಾ ಸದಸ್ಯ ವಿಜಯ್ ಕೊಡವೂರು, ಬ್ರಾಹ್ಮಣ ಸಮಾಜ ಕಾರ್ಯದರ್ಶಿ ಶ್ರೀನಿವಾಸ್ ಬಾಯರಿ ಮತ್ತು ಆರೋಗ್ಯ ಸಮಿತಿ ಪ್ರಮುಖ್ ಉಮೇಶ್ ಹಾಗೂ ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply