ಸರಕಾರದ ಮಾರ್ಗ ಸೂಚಿಗಳನ್ನು ಅವಶ್ಯವಾಗಿ ಪಾಲಿಸಬೇಕು~ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ

ಉಡುಪಿ: ಇನ್ನು ಮುಂದೆ ಹಬ್ಬಗಳು ಸಾಲು ಸಾಲಾಗಿ ಬರಲಿರುವುದರಿಂದ ಕೋರೊನಾ ನಿಯಮಗಳನ್ನು ಸರಕಾರ ಸಡಿಲ ಗೊಳಿಸಿದೆ. ಆದರೆ ಸಾರ್ವಜನಿಕರು ಎಚ್ಚರಿಕೆ ತಪ್ಪಬಾರದು. ಮಾಸ್ಕ್ ಧರಿಸುವುದು, ಕೈಗಳನ್ನು ತೊಳೆಯುವುದು, ವೈಯಕ್ತಿಕ ಅಂತರ ಕಾಯ್ದುಕೊಳ್ಳುವುದನ್ನು ಸರಿಯಾಗಿ ಪಾಲಿಸಬೇಕೆಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮನವಿ ಮಾಡಿದ್ದಾರೆ.

ಸದ್ಯ ಹಬ್ಬಗಳ ಹಿನ್ನಲೆಯಲ್ಲಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೋವಿಡ್-19 ನಿಯಂತ್ರಣಕ್ಕೆ ಹೇರಿದ್ದ ನಿರ್ಬಂಧ ಗಳನ್ನು ಸಡಿಲಿಸಿ, ಪುಣ್ಯಕ್ಷೇತ್ರಗಳ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ಅವಕಾಶ ಕಲ್ಪಿಸಿದೆ. ಹಾಗಂತ ನಾವು ಮೈಮರೆಯುವಂತಿಲ್ಲ. ಆದರೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಹಾಗೂ ಇತರೆ ಸರಕಾರದ ಮಾರ್ಗ ಸೂಚಿಗಳನ್ನು ಅವಶ್ಯವಾಗಿ ಪಾಲಿಸಬೇಕು.

ಈ ಸೋಂಕಿನಿಂದ ದೇಶವನ್ನು ಮುಕ್ತಗೊಳಿಸಲು ಕೆಲವು ಸ್ವಯಂ ನಿಯಮಗಳನ್ನು ನಾವೇ ಅನುಸರಿಸಿಕೊಂಡು ಕ್ಷೇತ್ರ ದರ್ಶನ ಹಾಗೂ ಧಾರ್ಮಿಕ ಕಾರ್ಯಗಳನ್ನು ಮಾಡಿ ಕೊರೋನಾ ಮುಕ್ತಿಗಾಗಿ, ಲೋಕದ ಹಿತಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಬೇಕು ಎಂದಿದ್ದಾರೆ.ಸ್ವಸ್ತ ಸಮಾಜ ನಿರ್ಮಾಣ ಕೇವಲ‌ ಸರ್ಕಾರದ ಜವಾಬ್ದಾರಿಯಲ್ಲ ಎಲ್ಲರ ಕರ್ತವ್ಯ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.

 
 
 
 
 
 
 
 
 

Leave a Reply