ಮೂರನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ – ಶಾಸಕ ರಘುಪತಿ ಭಟ್ ಭಾಗಿ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ, ಪುಣೆ ಇದರ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೇಚರ್ ಕ್ಯೂರ್ ಹಾಸ್ಪಿಟಲ್ ಸೌಖ್ಯವನ ಪರೀಕ ಉಡುಪಿ ಇಲ್ಲಿ ಇಂದು ದಿನಾಂಕ 19-11-2020 ರಂದು ನಡೆದ ಮೂರನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮ ದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಭಾಗವಹಿಸಿ ಶುಭ ಹಾರೈಸಿದರು.ಬಳಿಕ ಪರ್ಕಳ ವಾರ್ಡ್ ದೇವಿ ನಗರದ ಬಳಿಯಲ್ಲಿ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಪರೀಕಾ ವತಿಯಿಂದ ಬ್ಯಾರಿಕೇಟ್ ಅಳವಡಿಸಲಾಗಿದ್ದು, ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾಕ್ಟರ್ ಅಲಕಾನಂದ ರಾವ್, ಶಾಂತಿವನ ಟ್ರಸ್ಟಿನ ಕಾರ್ಯದರ್ಶಿಗಳಾದ ಶ್ರೀ ಬಿ. ಎಸ್ ತೋಳ್ಪಡಿತ್ತಾಯ, ಪರೀಕಾದ ಮುಖ್ಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಶಿವರಾಜ್ ವಿ ಪಾಟೀಲ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply