ಉಡುಪಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ಸದಸ್ಯರಿಗೆ ಮಣಿಪಾಲ ಮಾಧವ ಕೃಪಾ ಶಾಲೆಯಲ್ಲಿ ಏರ್ಪಡಿಸಿದ್ದ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಉಡುಪಿ ಜೆಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಬೇಟಿ ನೀಡಿದರು.
ಕೋವಿಡ್ ನಿಯಂತ್ರಣ ಸಾಧಿಸವಾಗಬೇಕಾದರೆ ಪ್ರತಿಯೊಬ್ಬರಿಗೂ ವ್ಯಾಕ್ಸಿನೇಷನ್ ಆಗಬೇಕು. ಈ ನಿಟ್ಟಿನಲ್ಲಿ ಹಂತಹಂತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಆರೋಗ್ಯ ಇಲಾಖೆಯಿಂದ ಆಗುತ್ತಿದೆ. ಯಾವುದೇ ಗೊಂದಲ ಬೇಡ, ಲಸಿಕೆ ಲಭ್ಯವಿರುವ ಸಮಯದಲ್ಲಿ ಪ್ರತಿಯೊಬ್ಬ ಪ್ರಜೆಯೂ ಲಸಿಕೆ ಪಡೆದು ಕೋವಿಡ್ ನಿಯಂತ್ರಣಕ್ಕಾಗಿ ಸಹಕಾರ ನೀಡಿ ಅಪರ ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ವಲಯ ಅಧ್ಯಕ್ಷ ಪ್ರಕಾಶ್ ಕೊಡಂಕೂರ್, ಕಾರ್ಯದರ್ಶಿ ಸುಕೇಶ್ ಅಮೀನ್ , ಜಿಲ್ಲಾಧ್ಯಕ್ಷ ಕರಂದಾಡಿ ಶ್ರೀಧರ್ ಶೆಟ್ಟಿಗಾರ್, ಜಿಲ್ಲಾ ಮಾಧ್ಯಮ ಪ್ರತಿನಿಧಿ ಜನಾರ್ದನ್ ಕೊಡವೂರು, ಆಸ್ಟ್ರೋ ಮೋಹನ್, ಭಾರತಿ ಭಾಸ್ಕರ್, ಮಹೇಶ್ ಸುವರ್ಣ, ರಂಜಿತ್ ಕೊಡವೂರು, ರಾಘವೇಂದ್ರ ನಾಯಕ್, ಮಿತ್ರ ಕುಮಾರ್ ಉಪಸ್ಥಿತರಿದ್ದರು.