ವಿಶ್ವ ಕ್ಯಾನ್ಸರ್ ದಿನ- ೨೦೨೧- ವಿಶಿಷ್ಟ ೩-ಡಿ ಕಲಾಕೃತಿ ಅನಾವರಣ

ಉಡುಪಿ: ವಿಶ್ವ ಕ್ಯಾನ್ಸರ್ ದಿನ ೨೦೨೧ ರ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಮ್.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಕಲಾವಿದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೆಬೆಟ್ಟು ರಚಿಸಿದ ಬೃಹತ್ ತ್ರಿ-ಡಿ ರಿಬ್ಬನ್ ಕಲಾಕೃತಿಯುನ್ನು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಸುಮಾ ನಾಯರ್ ಅವರು ಅನಾವರಣಗೊಳಿಸಿದರು.ಈ ಕಲಾಕೃತಿಯು ಕೆ.ಎಮ್.ಸಿ ಇಂಟರಾಕ್ಟ್ ಆವಾರಣ ದಲ್ಲಿ ಒಂದು ವಾರಗಳ ಕಾಲ ಪ್ರದರ್ಶನದಲ್ಲಿರುತ್ತದೆ.

ಭಾರತದಲ್ಲಿ ಚಾಲನೆಯಲ್ಲಿರುವ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳ ಕಾಯ್ದೆಯನ್ನು ಕೇಂದ್ರ ಸರಕಾರ ಪರಿಷ್ಕರಿಸಲು ಉದ್ದೇಶಿಸಿರುವುದು ಸ್ವಾಗತಾರ್ಹ . ತಂಬಾಕು ಬಳಕೆಯ ಪ್ರಮಾಣವನ್ನು ಮತ್ತಷ್ಟು ತಗ್ಗಿಸಲು ಹೊಸ ಕಾಯ್ದೆ ಪೂರಕವಾಗಲಿದೆ. ಈ ನಿಟ್ಟಿನಲ್ಲಿ ಸಮುದಾಯ ವೈದ್ಯಕೀಯ ವಿಭಾಗ, ಕೆ ಎಂ ಸಿ ಮಣಿಪಾಲ ತಿದ್ದುಪಡಿಗೆ ಸಂಪೂರ್ಣ ಬೆಂಬಲವನ್ನು ಸೂಚಿಸುತ್ತದೆ ಎಂದು ಸಮುದಾಯ ವೈದ್ಯಕೀಯ ವಿಭಾಗದ ಡಾ.ಮುರಳೀಧರ್ ಕುಲಕರ್ಣಿ ತಿಳಿಸಿದರು.

ತಂಬಾಕು ಬಳಕೆ ಕ್ಯಾನ್ಸರ್‌ಗೆ ಕಾರಣವಾಗಿದೆ. ಆದ್ದರಿಂದ ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಎಲ್ಲರೂ ಕ್ಯಾನ್ಸರ್ ಖಾಯಿಲೆಯ ಬಗ್ಗೆ ಹಾಗೂ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಿ ಆರೋಗ್ಯ ವೃದ್ಧಿಸೋಣ ಎಂದು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ.ಸುಮಾ ನಾಯರ್ ಹೇಳಿದರು.

 
 
 
 
 
 
 
 
 
 
 

Leave a Reply