ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆ~ಸಿಎಂ

ತಮ್ಮ ದಿಲ್ಲಿ ಭೇಟಿ ಯಶಸ್ವಿ ಎಂದ ಸಿಎಂ : ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆಯ ಅಪೇಕ್ಷೆ

ಹೊಸದಿಲ್ಲಿ: ಸಂಪುಟ ವಿಸ್ತರಣೆ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭ ವಾಗುವ ಮುನ್ನವೇ ಮಾಡಬೇಕೆಂಬುದು ತಮ್ಮ ಅಪೇಕ್ಷೆಯಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಕರ್ನಾಟಕದ ಭವನ-1 ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ, ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ. ನಡ್ಡಾರವರು ಪ್ರಧಾನಿ ಜೊತೆಗೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ಸಾಧ್ಯತೆ ಇದೆ ಎಂಬ ಅಂಶವನ್ನು ಸಿ.ಎಂ ಬಹಿರಂಗಪಡಿಸಿದ್ದಾರೆ. ವರಿಷ್ಠರ ಅನುಮತಿ ಮತ್ತು ಸಹಮತಿ ದೊರೆತ ಕೂಡಲೇ ಸಂಪುಟ ವಿಸ್ತರಿಸುವುದಾಗಿ ಹೇಳಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿಯವರ ಸಕಾರಾತ್ಮಕ ಸ್ಪಂದನೆ ದೊರೆತಿದೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸವನ್ನು ಸಿ ಎಂ ವ್ಯಕ್ತ ಪಡಿಸಿದ್ದಾರೆ.

ರಾಜ್ಯದ ಹಲವು ಯೋಜನೆಗಳ ಅನು ಮೋದನೆ ಹಾಗೂ ಮಂಜೂರಾತಿಯ ಕುರಿತು ಕೇಂದ್ರದ ಹಲವು ಸಚಿವರನ್ನೂ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ, ಎಲ್ಲರು ಕೂಡ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ರೀತಿಯಲ್ಲಿ ತಮ್ಮ ದಿಲ್ಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply