ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಚಾರ್ಮಾಡಿ ರಸ್ತೆಗಳಲ್ಲಿ ಗುಡ್ಡ ಕುಸಿತವಾಗಿದ್ರೆ, ಮತ್ತೊಂದು ಕಡೆ ರಸ್ತೆ ಬಿರುಕು ಬಿಟ್ಟು ಸಂಚಾರ ಸ್ಥಗಿತಗೊಂಡಿತ್ತು.
ಪರ್ಯಾಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರಿಗೆ ಬರುವ ಜನ ಶಿರಾಡಿ ರಸ್ತೆ ಮೂಲಕ ಸಂಚರಿಸುವಂತೆ ಆದೇಶಿಸಲಾಗಿದೆ.
ಇದೀಗ ಹತ್ತಾರುಕಡೆ ಗುಡ್ಡ ಕುಸಿತ ಹಿನ್ನೆಲೆ ಆಗಸ್ಟ್ 11 ವರೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.