ಬೆಳೆ ಸಮೀಕ್ಷೆ ಉತ್ಸವದ ಮಾಹಿತಿ ರಥಕ್ಕೆ ಚಾಲನೆ

ಕರ್ನಾಟಕ ಸರ್ಕಾರ, ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉಡುಪಿ ವತಿಯಿಂದ ತಯಾರಿಸಲಾದ 2020- 21ನೇ ಸಾಲಿನ ಬೆಳೆ ಸಮೀಕ್ಷೆ ಉತ್ಸವದ ಮಾಹಿತಿ ರಥಕ್ಕೆ ಇಂದು ಶಾಸಕರಾದ ಕೆ. ರಘುಪತಿ ಭಟ್ ರವರು ಹಸಿರು ನಿಶಾನೆ ತೋರಿಸು ವುದರ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್, ಉಪಾಧ್ಯಕ್ಷ ಶರತ್ ಬೈಲಕೆರೆ, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಶಿಲ್ಪಾ ರವೀಂದ್ರ, ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್, ತೋಟಗಾರಿಕೆ ಇಲಾಖೆ ಯ ಹಿರಿಯ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್, ಕೃಷಿ ಅಧಿಕಾರಿಗಳಾದ ವೃಂದಾ ಕೆ.ಎಸ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply