ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನ..?

ಉಡುಪಿ ಜಿಲ್ಲೆಯ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಕುರಿತು ಗುರುವಾರದಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಅವ ರೊಂದಿಗೆ ಶಾಸಕ ಕೆ ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು.

ರೈತರ ಬೇಡಿಕೆಯಂತೆ ಸಕ್ಕರೆ ಕಾರ್ಖಾನೆ ಯನ್ನು ಗ್ಲೋಬಲ್ ಟೆಂಡರ್ ಮೂಲಕ ಖಾಸಗಿಯವರಿಗೆ ವಹಿಸಿ ಸಕ್ಕರೆ ಕಾರ್ಖಾನೆ ಯನ್ನು ಆರಂಭಿಸುವ ಬಗ್ಗೆ ಸಚಿವರಿಗೆ ಹಾಗೂ ಇಲಾಖೆ ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಶಾಸಕರ ಬೇಡಿಕೆಯಂತೆ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ತಕ್ಷಣದಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

 
 
 
 
 
 
 
 
 
 
 

Leave a Reply