ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗೆ ಚಾಲನೆ

ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿಗೆ ಚಾಲನೆ

ಉಡುಪಿ: ಮಲ್ಪೆ- ಪಡುಕೆರೆ ಭಾಗದಲ್ಲಿ ಗಾಳಿ ಮಳೆಯಿಂದ ವಿದ್ಯುತ್ ತಂತಿ ತುಂಡಾಗಿ ವಿದ್ಯುತ್ ವ್ಯತ್ಯಯ ಆಗುತ್ತಿದ್ದು, ಮೆಸ್ಕಾಂನಿಂದ ಮಲ್ಪೆ- ಪಡುಕೆರೆ ಭಾಗದಲ್ಲಿ ಸುಮಾರು 1.5 ಕೋ. ರೂ. ವೆಚ್ಚದಲ್ಲಿ 5.2 ಕಿ. ಮೀ. ವರೆಗೆ 11 ಕೆ.ವಿ ಅಂಡರ್ ಗ್ರೌಂಡ್ ಕೇಬಲ್ ಅಳವಡಿಸಲಾಗಿದೆ. ಈ ಕಾಮಗಾರಿಯನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.

 


ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರಬಾಬು, ಅಂಬಲಪಾಡಿ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕೆ. ಸಾಲ್ಯಾನ್, ಕಡೆಕಾರ್ ಪಂಚಾಯತ್ ಮಾಜಿ ಅಧ್ಯಕ್ಷ ರಘುನಾಥ ಕೋಟ್ಯಾನ್, ಸದಸ್ಯ ಶಾಂತರಾಜ್, ದೇವಿ ಆಂಜನೇಯ ಸಂಘ ಅಧ್ಯಕ್ಷ ದೀಪಕ್ ಸಾಲ್ಯಾನ್, ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ದಿನೇಶ್ ಉಪಾಧ್ಯ, ಸಹಾಯಕ ಕಾರ್ಯಪಾಲಕ ಅಭಿಯಂತರ ಗಣರಾಜ ಭಟ್ ಮೊದಲಾದವರಿದ್ದರು.

 
 
 
 
 
 
 
 
 
 
 

Leave a Reply