ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ
ಇದರ ವಿಶೇಷ ಕಾರ್ಯಕಾರಿಣಿ ಸಭೆಯು ಶುಕ್ರವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರ್ನಾಟಕ ಸರಕಾರದ ಮುಜರಾಯಿ ಸಚಿವರಾದ ಮಾನ್ಯ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸುವುದರ ಮೂಲಕ ನಡೆಯಿತು.


ಭಾ.ಜ.ಪ ಹಿಂದುಳಿದ ವರ್ಗಗಳ ಮೋರ್ಚಾ ಉಡುಪಿ ಜಿಲ್ಲೆ ಇದರ ಅಧ್ಯಕ್ಷ ಶ್ರೀ ಸುರೇಂದ್ರ ಪಣಿಯೂರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿಭಾಜಪ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಶೋಕ ಮೂರ್ತಿ, ಪ್ರಧಾನ ಕಾರ್ಯದರ್ಶಿ ಸುರೇಶ ಬಾಬು, ವಿವೇಕಾ ನಂದ ಡಬ್ಬಿಯವರು, ಕಾರ್ಯದರ್ಶಿ ವಿಠ್ಠಲ ಪೂಜಾರಿಯವರು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪ ಜಿ ಸುವರ್ಣ, ಮಂಗಳೂರು ಸಹ-ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಓಬಿಸಿ ಮೋರ್ಚಾ ಪ್ರಭಾರಿ ರೇಷ್ಮಾ ಉದಯ ಶೆಟ್ಟಿ,

ಜಿಲ್ಲಾ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸತೀಶ ಕುಲಾಲ, ಅರುಣ ಬಾಣ, ಆರು ಮಂಡಲದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು , ಹಿಂದುಳಿದ ವರ್ಗದ ಜಿಲ್ಲಾ ಪಂಚಾಯತ್ ಸದಸ್ಯರು, ಹಿಂದುಳಿದ ವರ್ಗದ ತಾಲೂಕು ಪಂಚಾಯತ್ ಸದಸ್ಯರು, ಜಿಲ್ಲಾ ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿಣಿಯ ಸದಸ್ಯರು ಉಪಸ್ಥಿತ ರಿದ್ದರು.


ಈ ಕಾರ್ಯಕ್ರಮದಲ್ಲಿ ಅಗಲಿದ ಪಕ್ಷದ ಹಿರಿಯ ಗಣ್ಯರಿಗೆ ಸಂತಾಪ ಸಲ್ಲಿಸಲಾಯ್ತು. ಹಿರಿಯ ನಾಯಕರಿಂದ ಸಂಘಟನಾತ್ಮಕ ವಿಚಾರಗಳ ಮಾಹಿತಿ , ಮೋರ್ಚಾಗಳ ವರದಿ ಮಂಡನೆ, ಹಾಗೂ ನಿರ್ಣಯ ಮಂಡಿಸ ಲಾಯ್ತು ..

 
 
 
 
 
 
 
 
 
 
 

Leave a Reply