ಪ್ರಧಾನ ಮಂತ್ರಿಯವರ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಶಾಸಕ ವೇದವ್ಯಾಸ ಕಾಮತ್ ಕಾರ್ಯರೂಪಕ್ಕೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಮಹತ್ವಕಾಂಕ್ಷಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ರವರು ತಮ್ಮ ವೈಯುಕ್ತಿಕ ನೆಲೆಯಲ್ಲಿ ತಲಾ 1000 ರೂಪಾಯಿಯಂತೆ 37 ಹೆಣ್ಣು ಮಕ್ಕಳ ಹೆಸರಿನಲ್ಲಿ ಠೇವಣಿ ಇರಿಸಿದ್ದರು. ಇವತ್ತು ಈ ಯೋಜನೆಯ ಪಾಸ್ ಪುಸ್ತಕವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ರವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭ ಶಾಸಕರಾದ ವೇದವ್ಯಾಸ್ ಕಾಮತ್, ಪ್ರಮುಖರಾದ ವಿಜಯ ಕುಮಾರ್ ಶೆಟ್ಟಿ, ಸಂತೋಷ್ ರೈ, ಕಸ್ತೂರಿ ಪಂಜ, ಮಂಗಳ ಆಚಾರ್ಯ, ರೂಪ ಬಂಗೇರ, ಪೂರ್ಣಿಮ ರಾವ್, ಸೇವಂತಿ ಶ್ರೀಯಾನ್, ಆಶಾ ಡಿ ಸಿಲ್ವಾ, ಪೂರ್ಣಿಮ ಉಪಸ್ಥಿತ ರಿದ್ದರು.

 
 
 
 
 
 
 
 
 

Leave a Reply