ಬಿಕೆ ಹರಿಪ್ರಸಾದ್ ನೀಡಿದ ಮಾಹಿತಿ ತಪ್ಪು ~ ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಮತದಾರರ ಪಟ್ಟಿಯಲ್ಲಿ ಆಗುವ ಲೋಪಕ್ಕೆ ಅಂದರೆ ಯಾವುದೇ ತಪ್ಪುಗಳಿಗೆ ಜಿಲ್ಲಾಡಳಿತ ಹೊಣೆ ಎಂದು ವಿಧಾನ ಪರಿ ಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆರೋಪಿ ಸಿದ್ದರು. ಇದೀಗ ಜಿಲ್ಲಾಧಿಕಾರಿ ಜಿ. ಜಗದೀಶ್ ಅದನ್ನು ಅಲ್ಲಗಳೆದಿದ್ದಾರೆ.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತ ನಾಡಿದ ಅವರು, ಕೇಂದ್ರ ಚುನಾವಣಾ ಆಯೋಗ ಸ್ವತಂತ್ರವಾಗಿ ಮತದಾರರ ಪಟ್ಟಿ ತಯಾರಿಸಿ ಜಿಲ್ಲಾಡಳಿತಕ್ಕೆ ಕಳುಹಿಸುತ್ತದೆ. ಅದರಲ್ಲಿ ಕಿಂಚಿತ್ತು ಬದಲಾವಣೆಗೂ ಜಿಲ್ಲಾಡಳಿತಕ್ಕೆ ಯಾವುದೇ ಅವಕಾಶ ವಿರುವುದಿಲ್ಲ ಎಂದಿದ್ದಾರೆ.

ಇನ್ನು ಒಂದೇ ಕುಟುಂಬದವರು ಬೇರೆ ಬೇರೆ ಸೀರಿಯಲ್ ಸಂಖ್ಯೆಯ ಗುರುತಿನ ಚೀಟಿ ಹೊಂದಿದ್ದರೆ 8ಎ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬಹುದು ಎಂಬ ಮಾಹಿತಿ ಯನ್ನು ನೀಡಿದ್ದಾರೆ.

 
 
 
 
 
 
 
 
 
 
 

Leave a Reply