ಬಿಜೆಪಿ ಎಸ್.ಸಿ ಮೋರ್ಚಾದ ಜಿಲ್ಲಾ ಮಟ್ಟದ ಪ್ರಮುಖರ ಸಭೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯ ಸಭಾಂಗಣದಲ್ಲಿ 04-11-2020 ರಂದು ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ರಾಜ್ಯ ಪದಾಧಿಕಾರಿಗಳು ಹಾಗೂ ಮಂಗಳೂರು ವಿಭಾಗ ಮತ್ತು ಉತ್ತರ ಕನ್ನಡ ಜಿಲ್ಲಾ ಮಟ್ಟದ ಪ್ರಮುಖರ ಸಭೆ ನಡೆಯಿತು.

ಈ ಸಭೆಯನ್ನು ಶಾಸಕ ಶ್ರೀ ಕೆ ರಘುಪತಿ ಭಟ್ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ನಾರಾಯಣ ಸ್ವಾಮಿ ಅವರು ಸಭಾಧ್ಯಕ್ಷತೆ ವಹಿಸಿದ್ದರು.

ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾದ ಪ್ರಧಾನ ಕಾರ್ಯ ದರ್ಶಿ ದಿನಕರ್ ಬಾಬು, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ಗೋಪಾಲ ಕಳೆಂಜಿ, ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾ ಕಾರ್ಯದರ್ಶಿ ಜಗದೀಶ್, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply