ಬಿಜೆಪಿ ನಗರ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಪದ ಪ್ರದಾನ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಯುವ ಮೋರ್ಚಾದ ನೂತನ ಕಾರ್ಯಕಾರಿಣಿ ಸಮಿತಿ ಪದ ಪ್ರದಾನವು ಉಡುಪಿ ನಗರ ಬಿಜೆಪಿ ಕಚೇರಿಯಲ್ಲಿ ನಡೆಯಿತು.

ನೂತನ ಯುವ ಮೋರ್ಚಾದ ಅಧ್ಯಕ್ಷ ರೋಶನ್ ಎ ಶೆಟ್ಟಿ , ಪ್ರಧಾನ ಕಾರ್ಯದರ್ಶಿ ಸುಶಾಂತ್ ಪೂಜಾರಿ , ಉಪಾದ್ಯಕ್ಷ ವಿಜಯ್ ಭಟ್ ಮತ್ತು ಕಾರ್ಯಕಾರಿಣಿ ಸದಸ್ಯರು ಗಳು ಹಾಗು ಯುವ ಮೋರ್ಚಾ ಮಹಾಶಕ್ತಿ ಕೇಂದ್ರಗಳ ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು.

ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶಪಾಲ್ ಸುವರ್ಣ, ಜಿಲ್ಲಾ ಯುವ ಮೋರ್ಚಾ ಪ್ರದಾನ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ, ಶರತ್ ಬೈಂದೂರು, ನಗರ ಬಿಜೆಪಿ ಪ್ರದಾನ ಕಾರ್ಯದರ್ಶಿ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ ಉಪಸ್ಥಿತರಿದ್ದರು

 
 
 
 
 
 
 
 
 

Leave a Reply