ಬೆಂಗಳೂರು ಗಲಭೆಯ ತನಿಖೆ ತೀವ್ರ~ಗ್ರಹಸಚಿವ

ಬೆಂಗಳೂರು: ಕೆ.ಜಿ. ಹಳ್ಳಿ ಮತ್ತು ಡಿ.ಜಿ.ಹಳ್ಳಿಯಲ್ಲಿ ನಡೆದ ಗಲಭೆಯನ್ನು ಕೂಲಂಕುಶವಾಗಿ ಗಮನಿಸಿದಾಗ ಇದರ ಹಿಂದೆ ಎಸ್‌.ಡಿ.ಪಿ.ಐ. ಪಾತ್ರ ಇರಬಹುದೆಂಬ ಅನುಮಾನ ಬರುತ್ತಿದೆ. ಆದರೂ ಈ ಬಗ್ಗೆ ಸರಿಯಾದ ತನಿಖೆ ನಡೆಯಬೇಕಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಗಲಭೆಗೆ ಸಂಬಂಧಿಸಿದಂತೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ ಮಂಗಳೂರಿನಲ್ಲಿ, ಮೈಸೂರಿನಲ್ಲಿ ನಡೆದ ಗಲಭೆಯಲ್ಲಿ ಎಸ್.ಡಿ.ಪಿ.ಐ ಪಾತ್ರದ ಬಗ್ಗೆ ತನಿಖೆ ನಡೆಸುತ್ತಲೇ ಇದೆ. ಮತ್ತಷ್ಟು ತನಿಖೆ ನಡೆಸಬೇಕಿದೆ ಎಂದರು.

ಈ ಗಲಭೆಯಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರು ಅವರಿಗೆ ಸರಿಯಾದ ಶಿಕ್ಷೆ ಆಗುತ್ತದೆ. ಈಗ ಸಿಕ್ಕಿರುವ ಮಾಹಿತಿಯ ಆಧಾರದ ಮೇಲೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದರು.

 
 
 
 
 
 
 
 
 
 
 

Leave a Reply