ಬ್ರಹ್ಮಾವರ ನೂತನ ತಾಲೂಕು ಪಂಚಾಯತ್ ಕಚೇರಿ ಉದ್ಘಾಟನೆ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸದಾಗಿ ಘೋಷಣೆಯಾಗಿರುವ ಬ್ರಹ್ಮಾ ವರ ತಾಲೂಕು ಪಂಚಾಯತ್ ನ ನೂತನ ಕಚೇರಿ ಸೋಮವಾರದಂದು ಉದ್ಘಾಟನೆ ಗೊಂಡಿತು.

ಮೀನುಗಾರಿಕಾ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಶ್ರೀ ಕೆ ರಘುಪತಿ ಭಟ್ ಇವರು ಉದ್ಘಾಟನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶೀಲಾ ಕೆ ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಅಧ್ಯಕ್ಷೆ ಜ್ಯೋತಿ ಉದಯಕುಮಾರ್, ಉಪಾಧ್ಯಕ್ಷ ಸುಧೀರ್ ಶೆಟ್ಟಿ, ಗ್ರಾಮಾಂತರ ಬಿಜೆಪಿಯ ಅಧ್ಯಕ್ಷ ವೀಣಾ ನಾಯ್ಕ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು, ಇತರ ಪ್ರಮುಖರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply