ಮೀನುಗಾರಿಕೆ ಕ್ರಿಯಾ ಯೋಜನೆ ಬಿಡುಗಡೆಗೊಳಿದ ಸಿಎಂ

ಬೆಂಗಳೂರು: ವಿಶ್ವ ಮೀನುಗಾರಿಕಾ ಕೃಷಿ ದಿನಾಚರಣೆ ಅಂಗವಾಗಿ ಗುರುವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗೃಹ ಕಚೇರಿ ‘ಕೃಷ್ಣಾ’ ದಲ್ಲಿ ಮೀನುಗಾರಿಕೆ ಇಲಾಖೆಯ ಕ್ರಿಯಾ ಯೋಜನೆ ಬಿಡುಗಡೆಗೊಳಿಸಿದರು. 

ಮೀನುಗಾರಿಕೆಯಲ್ಲಿ ನಿರತರಾಗಿದ್ದ ಸಂದರ್ಭ ಮೃತಪಟ್ಟ ಮೀನುಗಾರರಿಗೆ ಸಂಕಷ್ಟ ಪರಿಹಾರ ನಿಧಿಯಿಂದ ಮಂಜೂರಾದ ತಲಾ 6 ಲಕ್ಷ ರೂ.ಗಳ ಚೆಕ್ ನ್ನು ಸಾಂಕೇತಿಕವಾಗಿ ಎರಡು ಮೀನುಗಾರ ಕುಟುಂಬ ಸದಸ್ಯರಿಗೆ ವಿತರಿಸಲಾಯಿತು.

ಮೀನುಗಾರಿಕೆ ಹಾಗೂ ಬಂದರು ಇಲಾಖೆ ಮೂಲಕ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಿರುವ ಮುಖ್ಯಮಂತ್ರಿಗೆ ಕರಾವಳಿ ಜಿಲ್ಲೆಗಳ ಮೀನುಗಾರರ ಪರವಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಳ್ಳಿಯ ಮೀನು ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಉಡುಪಿ ಶಾಸಕ ಕೆ. ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹಾಗೂ ಇಲಾಖೆಯ ಅಧಿಕಾರಿಗಳು ಇದ್ದರು.

 
 
 
 
 
 
 
 
 
 
 

Leave a Reply