ವಿದ್ಯುತ್ ಅಲಂಕಾರದ ಕೇಬಲ್ ತಾಗಿ ಬಾಲಕ ಸಾವು

  1. ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ನಲ್ಲಿ ನವರಾತ್ರಿ ಉತ್ಸವಕ್ಕೆಂದು ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಾಗಿ ಬಾಲಕ ನೋರ್ವ ಮೃತ ಪಟ್ಟ ಘಟನೆ ಶನಿವಾರ ನಡೆದಿದೆ. ಧನುಷ್ (16) ಮೃತ ಬಾಲಕ.
  2. ಧನುಷ್ ತನ್ನ ಮನೆ ಸಮೀಪದ ದೇವ ಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆಂದು ಶನಿವಾರ ರಾತ್ರಿ 8ಗಂಟೆಗೆ ತೆರಳಿದ್ದು, ರಾತ್ರಿ 9.30 ಗಂಟೆಗೆ ದೇವಸ್ಥಾನದ ದಕ್ಷಿಣ ದಿಕ್ಕಿನ ಕಂಪೌಂಡ್ ಗೋಡೆಗೆ ಅಳವ ಡಿಸಿದ ವಿದ್ಯುದ್ದೀ ಪದ ಕೇಬಲ್ ಆಕಸ್ಮಿಕವಾಗಿ ತಾಗಿ ಅಸ್ವಸ್ಥ ಗೊಂಡಿ ದ್ದಾನೆ.
  3. ತಕ್ಷಣ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ದ್ದಾರೆ. ಅಷ್ಟೋತ್ತಿಗಾಗಲೇ ಬಾಲಕ ವಿದ್ಯುತ್ ಶಾಕ್ ನಿಂದ ಮೃತ ಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
 
 
 
 
 
 
 
 
 
 

Leave a Reply