ಶೀಘ್ರದಲ್ಲಿ ಮೀನುಗಾರರಿಗೆ ಡೀಸೆಲ್ ಪಾಸ್~ಶಾಸಕ ಕೆ. ರಘುಪತಿ ಭಟ್

ಮಲ್ಪೆ ಮೀನುಗಾರರ ಸಂಘದ ವತಿಯಿಂದ ನಡೆದ ಸಭೆಯಲ್ಲಿ ಭಾಗವಹಿಸಿದ ಶಾಸಕ ಕೆ. ರಘುಪತಿ ಭಟ್ ರವರು ಮೀನುಗಾರಿಕೆ ನಡೆಸಲು ಶೀಘ್ರದಲ್ಲಿ ಮೀನುಗಾರರಿಗೆ ಡೀಸೆಲ್ ಪಾಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮೀನುಗಾರಿಕೆಗೆ ಸಂಬಂಧಿಸಿದ ಚರ್ಚೆಗಳು ನಡೆದು ಬಂದರಿನ ಒಳಗಡೆ ವಾಹನ ನಿಲುಗಡೆಯನ್ನು ಸ್ಥಗಿತಗೊಳಿ ಸುವುದು, ಬಂದರಿಗೆ ಬರುವ ಬೋಟ್ ಗಳಿಗೆ ಪ್ರತ್ಯೇಕ ವಿಭಾಗದವರು ಅವರ ಸಂಘದ ವತಿಯಿಂದ ಸ್ವಯಂ ಸೇವಕರನ್ನು ನೇಮಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಬೋಟುಗಳಲ್ಲಿನ ಮೀನುಗಳನ್ನು ಖಾಲಿ ಮಾಡುವ ಬಗ್ಗೆ ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘ (ರಿ) ಮಲ್ಪೆ ಇದರ ಅಧ್ಯಕ್ಷ ಕೃಷ್ಣ ಸುವರ್ಣ, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್, ಮೀನು ಗಾರಿಕಾ ಉಪ ನಿರ್ದೇಶಕ ಗಣೇಶ್, ಸಹಾಯಕ ನಿರ್ದೇಶಕ ಶಿವಕುಮಾರ್, ಕರಾವಳಿ ಕಾವಲು ಪಡೆಯ ಉಪ ನಿರೀಕ್ಷ ಕ ಹಾಗೂ ವಿವಿಧ ಸಂಘದ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply