ಎಚ್. ಬಿ. ನಾಗೇಶ್ ನಿಧನಕ್ಕೆ ಕಂಬನಿ

ಉಡುಪಿ: ಕರ್ನಾಟಕ ಕಾರ್ಮಿಕ ವೇದಿಕೆ ಸಂಸ್ಥಾಪಕ, ಕರ್ನಾಟಕ ಸಂಘಟನೆಗಳ ಒಕ್ಕೂಟ ಅಧ್ಯಕ್ಷ, ಸಾಮಾಜಿಕ ಹೋರಾಟಗಾರ ಬೆಂಗಳೂರಿನ ಎಚ್. ಬಿ. ನಾಗೇಶ್ (೫೫ ವ.) ಜು. ೨೫ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.
ಡಾ| ಸರೋಜಿನಿ ಮಹಿಷಿ ವರದಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವಂತೆ ಈಚೆಗೆ ಅವರು ತೀವ್ರ ಪ್ರತಿಭಟನೆ ನಡೆಸಿದ್ದರು. ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ಸಂಘಟನೆಗಳ ನೇತೃತ್ವ ವಹಿಸಿಕೊಳ್ಳುತ್ತಿದ್ದರು.
ಅವರ ಅಗಲಿಕೆಗೆ ಉಡುಪಿ ಕಾರ್ಮಿಕ ವೇದಿಕೆ ಮುಖಂಡ ರವಿ ಶಾಸ್ತಿç ಬನ್ನಂಜೆ ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
 
 
 
 
 
 
 
 
 
 
 

Leave a Reply