ಹಿಜಾಬ್‌ -ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ಉಡುಪಿಯಲ್ಲಿ 144 ಸೆಕ್ಷನ್

ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್‌ – ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕ 16.02.2022 ರಿಂದ ರಾಜ್ಯಾದ್ಯಂತ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್‌ ಮತ್ತು ಪದವಿ ಕಾಲೇಜುಗಳ ಆರಂಭಕ್ಕೆ ಮಾನ್ಯ ಘನವೆತ್ತ ಕರ್ನಾಟಕ ರಾಜ್ಯ ಸರಕಾರವು ಆಧೇಶ ನೀಡಿದ್ದು, ಈ ಬಗ್ಗೆ ಉಡುಪಿ ಜಿಲ್ಲೆಯ 3 ಪೋಲೀಸ್‌ ಉಪ ವಿಭಾಗಾಧಿಕಾರಿರವರು ಮಾಡಿಕೊಂಡ ಮನವಿ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಿನಾಂಕ 16.02.2022 ರ ಬೆಳಿಗ್ಗೆ 6.00 ರಿಂದ ದಿನಾಂಕ 23.02.2022ರ ಸಂಜೆ 6.00ಗಂಟೆಯವರೆಗೆ ಜಿಲ್ಲೆಯ ಎಲ್ಲಾ ಪದವಿಪೂರ್ವ, ಪಾಲಿಟೆಕ್ನಿಕ್‌ ಮತ್ತು ಪದವಿ ಕಾಲೇಜುಗಳ ಸುತ್ತ ಮುತ್ತಲು 200ಮೀ ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರ ಅನ್ವಯ ಪ್ರತಿಬಂಧಕಾಜ್ಞೆಯನ್ನು ಜ್ಯಾರಿಗೊಳಿಸುವಂತೆ ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರು ಉಲ್ಲೇಖದಂತೆ ಮನವಿ ಸಲ್ಲಿಸಿರುತ್ತಾರೆ.

ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯಕವಾಗಿದೆ ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳಿಗೆ ಎಡೆಮಾಡಿಕೊಡದಂತೆ ಸೂಕ್ತ ಮುಂಜಾಗೃತಾ ಕ್ರಮ ತೆಗೆದುಕೊಳ್ಳಲು ಉಲ್ಲೇಖಿತ ಪತ್ರದಲ್ಲಿನ ಪೊಲೀಸ್‌ ಅಧೀಕ್ಷಕರು ಉಡುಪಿ ಜಿಲ್ಲೆ ಉಡುಪಿ ಇವರ ಮಾಹಿತಿಯನ್ನು ಆಧರಿಸಿ ಮುಂಜಾಗೃತ ಕ್ರಮವಾಗಿ ಕೂರ್ಮಾ ರಾವ್‌ ಎಂ ,ಭಾ.ಆ.ಸೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಕಂಡಂತೆ ಆದೇಶವನ್ನು ಹೊರಡಿಸಿರುತ್ತಾರೆ. 

ಮೇಲೆ ಸಕಾರಣಗಳೊಂದಿಗೆ ವಿವರಿಸಿದ ಅಂಶಗಳನ್ನು ಆಧರಿಸಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪದವಿಪೂರ್ವ, ಪಾಲಿಟೆಕ್ನಿಕ್‌ ಮತ್ತು ಪದವಿ ಕಾಲೇಜುಗಳ ಸುತ್ತ ಮುತ್ತಲು 200ಮೀ ಪ್ರದೇಶವನ್ನು ದಿನಾಂಕ: 16-02-2022 ರ ಬೆಳಿಗ್ಗೆ 6.00 ರಿಂದ ದಿನಾಂಕ 23-02-2022ರ ಸಂಜೆ 6.00ಗಂಟೆಯವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಆದೇಶ.
ಈ ನಿಷೇದಾಜ್ಞೆ ಜ್ಯಾರಿ ಇರುವ ಅವಧಿಯಲ್ಲಿ 1) ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಭಂಧಿಸಿದೆ.
2) ಯಾವುದೇ ವ್ಯಕ್ತಿಯ ಜಾತಿ/ ಧರ್ಮ /ಕೋಮು/ ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.
3) ಸರ್ಕಾರಿ ಸಂಸ್ಥೆಗಳು/ ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ /ಸಿಬ್ಬಂಧಿಗಳ ವಿರುದ್ಧ ನಿಂಧಿಸುವಂತಹ/ಅ ವಹೇಳನಕಾರಿಯಂತಹ ಯಾವುದೇ ಘೋಷಣೆಗಳು/ ಭಾಷಣಗಳು ಪ್ರಕಟಣೆಗಳು/ ಅವಾಚ್ಯ ಶಬ್ಧಗಳ ಬಳಕೆ/ ಪ್ರಚೋದನಾಕಾರಿ ಭಾಷಣಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ. 4) ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು. ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.
5) ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ. 6) ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ/ ರ‍್ಯಾಲಿ, ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ. 7) ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುನ್ನು ನಿಷೇಧಿಸಿದೆ.
8) ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. 9) ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದನ್ನು ನಿಷೇಧಿಸಿದೆ. 10) ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿದೆ.
11) ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಮಾಡುವುದು ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೊಗ ಮಾಡುವುದು, ಮತ್ತು ಚಿತ್ರಗಳನ್ನು
,ಸಂಕೇಗಳನ್ನು ಭಿತ್ತಿ ಪತ್ರಗಳನ್ನು ಆಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಈ ಆದೇಶವು ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪದವಿಪೂರ್ವ, ಪಾಲಿಟೆಕ್ನಿಕ್‌ ಮತ್ತು ಪದವಿ ಕಾಲೇಜುಗಳ ಸುತ್ತ ಮುತ್ತಲು 200ಮೀ ಪ್ರದೇಶವನ್ನು ದಿನಾಂಕ:16.02.2022 ರ ಬೆಳಿಗ್ಗೆ 6.00 ರಿಂದ ದಿನಾಂಕ 23.02.2022ರ ಸಂಜೆ 6.00ಗಂಟೆಯವರೆಗೆ ಜ್ಯಾರಿಯಲ್ಲಿರುತ್ತದೆ.

ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ, ಆಯಾ ಕಾಲೇಜು ಉಪನ್ಯಾಸಕರು/ ಶಿಕ್ಷಕರು/ ಸಿಬ್ಬಂಧಿ/ಪೋಷಕರು/ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ/ ಕಾಲೇಜು ಬಸ್‌ ಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಬ್ಯಾಂಕ್/ ಎ.ಟಿ.ಎಂ. ಭದ್ರತಾ ಸಿಬ್ಬಂದಿಗಳು ಮತ್ತು ಚುನಾವಣಾ ಕರ್ತವ್ಯದ ಲ್ಲಿ ನಿರತರಾಗಿರುವ ಸಿಬ್ಬಂದಿಗಳು ಮತ್ತು ಕೋವಿಡ್ -19 ನಿಯಂತ್ರಣ ಕರ್ತವ್ಯದಲ್ಲಿರುವ ಸಿಬ್ಬಂದಿಗಳ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಗೆ ಸಂಬಂಧಿಸಿದಂತೆ ಜ್ಯಾರಿಗೊಳಿಸಿದ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಸೂಚಿಸಿದೆ.

 
 
 
 
 
 
 
 
 
 
 

Leave a Reply