ಕುಡಿದ ಮತ್ತಿನಲ್ಲಿ ಗೆಳೆಯನ  ಕೊಲೆ

ಕುಡಿದ ಮತ್ತಿನಲ್ಲಿ ಗೆಳೆಯನ  ಕೊಲೆ : ಶವವನ್ನು ಸುಟ್ಟು ಹಾಕಲು ಯತ್ನಿಸಿ ಸಿಕ್ಕಿಬಿದ್ದ 

ಕಾಪು : ಕುಡಿದ ಮತ್ತಿನಲ್ಲಿ ಸ್ನೇಹಿತನನ್ನು ಕೊಲೆ ಮಾಡಿ,ಮೃತ ದೇಹವನ್ನು ಸುಟ್ಟು ಹಾಕಲು ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪುಂಚಲ ಕಾಡು ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಇಂದು ರಾತ್ರಿ ಕುಡಿದ ಮತ್ತಿನಲ್ಲಿ ತನ್ನ ಸ್ನೇಹಿತನನ್ನೇ ಕೊಲೆಗೈದ ಆರೋಪಿ ಬಳಿಕ ಮೃತದೇಹವನ್ನು ಸುಟ್ಟು ಹಾಕುವ ವಿಫಲ ಯತ್ನವನ್ನು ನಡೆಸಿದ್ದಾನೆ ಎನ್ನಲಾಗಿದೆ.ಕಾಪು ತಾಲೂಕಿನ ಕಳತ್ತೂರು ಸಮೀಪದ ಪುಂಚಲಕಾಡಿನಲ್ಲಿ ಶುಕ್ರವಾರ ರಾತ್ರಿ ಈ ಭೀಕರ ಘಟನೆ ನಡೆದಿದೆ. ಎರ್ಮಾಳು ನಿವಾಸಿ ಹೇಮಂತ್ ಪೂಜಾರಿ (45) ಕೊಲೆಯಾದ ವ್ಯಕ್ತಿ.ಪುಂಚಲಕಾಡು ನಿವಾಸಿ ಅಲ್ಬರ್ಟ್ ಡಿ ಸೋಜ (50) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಕೊಲೆ ಆರೋಪಿ ಅಲ್ಬರ್ಟ್ ಕೃತ್ಯ ನಡೆಸಿದ ಬಳಿಕ ಶವವನ್ನು ಮನೆಯಂಗಳದಲ್ಲೇ ಸುಡಲು ಯತ್ನಿಸಿದ್ದಾನೆ. ಇದಕ್ಕೆ ಕುರುಹಾಗಿ ಮೃತ ಹೇಮಂತ್ ಪೂಜಾರಿಯ ಅರೆಬೆಂದ ಶವ ಸಾಕ್ಷಿಯಾಗಿತ್ತು ಎಂದು ತಿಳಿಯಲಾಗಿದೆ. ಈ ಸಂದರ್ಭದಲ್ಲಿ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರ ಮೂಲಕ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಇದೀಗ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply