ಸಾವಿನಲ್ಲೂ ಜೊತೆಯಾದ ಅಣ್ಣ ತಂಗಿ

 ಮೈಸೂರು ಜಿಲ್ಲೆಯಲ್ಲಿ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸಾವನ್ನಪ್ಪಿದ ಅಣ್ಣನ ಮೃತದೇಹವನ್ನು ನೋಡಿ ತಂಗಿಯು ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಸೋಮನಹಳ್ಳಿ ಗೇಟ್ ಬಳಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ನಡೆದಿದೆ.
ಈ ಅಪಘಾತದಲ್ಲಿ ಕೀರ್ತಿ ಎಂಬ ಯುವಕನು ಸ್ಥಳದಲ್ಲೇ ಸಾವನ್ನಪ್ಪಿದ್ದ ಎನ್ನಲಾಗಿದೆ. ಈ ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದವು ಎಂದು ತಿಳಿದು ಬಂದಿದೆ. ಸಾವನ್ನಪ್ಪಿದ ಕೀರ್ತಿ ಅಂತ್ಯ ಸಂಸ್ಕಾರಕ್ಕೆ‌ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ ಅಣ್ಣನ ಮೃತ ದೇಹವನ್ನು ನೋಡಿ ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ ಎಂದು ತಿಳಿಯಲಾಗಿದೆ.
ಕುಸಿದು ಬಿದ್ದ ರಶ್ಮಿಯನ್ನು ತಕ್ಷಣ ಹುಣಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು,ಆದರೆ ಚಿಕಿತ್ಸೆ ಫಲಕಾರಿಯಾಗದೆ ರಶ್ಮಿಯು ಪ್ರಾಣಬಿಟ್ಟಿದ್ದಾಳೆ.  ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. 
 
 
 
 
 
 
 
 
 
 
 

Leave a Reply