ಖಾಸಗಿ ಬಸ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ತಮಿಳುನಾಡಿನ ಕಾವೇರಿಪಟ್ಟಿನಂ ಬಳಿ ಸಂಭವಿಸಿದೆ.
ಟ್ರ್ಯಾಕ್ಟರ್ನಲ್ಲಿ ಕಾರ್ಯಕ್ರಮವೊಂದಕ್ಕೆ 11 ಜನ ತೆರಳುತ್ತಿದ್ದರು. ಈ ವೇಳೆ ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುತ್ತಿದ್ದ ಖಾಸಗಿ ಬಸ್ಗೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ.
ಟ್ರ್ಯಾಕ್ಟರ್ ಚಾಲಕ, ಬಸ್ ಬರುತ್ತಿರುವುದನ್ನು ಗಮನಿಸದೇ ಮುಖ್ಯ ರಸ್ತೆಗೆ ಏಕಾಏಕಿ ಚಲಾಯಿಸಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ತೀವ್ರ ಗಾಯಗೊಂಡಿದ್ದ ಹತ್ತು ಜನರನ್ನು ಕೃಷ್ಣಗಿರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.