ಪೊಲೀಸ್ ಜೀಪ್ ಹಾಗೂ ಬೈಕ್ ನಡುವೆ ಅಪಘಾತ; ಸವಾರ ಸಾವು!

 ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯ ಬಳಿ ಪೊಲೀಸ್ ಜೀಪಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾತ್ರಿ ನಡೆದಿದೆ.
ಮೃತಪಟ್ಟವರು ಪಾಣಾಜೆ ಗ್ರಾಮದ ಕೋಟೆ ನಿವಾಸಿ, ಆರ್ಲಪದವಿನಲ್ಲಿರುವ ಪಾಣಾಜೆ ಸಿ.ಎ. ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ ನಾಯ್ಕ್ (51) ಎಂದು ತಿಳಿಯಲಾಗಿದೆ.
ಪುತ್ತೂರು ಕಡೆಗೆ ಬರುತ್ತಿದ್ದ ಪೊಲೀಸ್ ಜೀಪು ಹಾಗೂ ಆರ್ಲಪದವು ಕಡೆಗೆ ಸಂಚರಿಸುತಿದ್ದ ಬೈಕ್ ನಡುವೆ ಈ ಘಟನೆ ಸಂಭವಿಸಿದೆ.ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
 
 
 
 
 
 
 
 
 
 
 

Leave a Reply