ಆದರ್ಶ ಆಸ್ಪತ್ರೆ, ಉಡುಪಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಆದರ್ಶ ಆಸ್ಪತ್ರೆ, ಉಡುಪಿ ಬಸವ ಸಮಿತಿ, ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಉಡುಪಿ. ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಘಟಕ ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ : 08/10/2023 ಭಾನುವಾರ ಬೆಳಿಗ್ಗೆ 9:30ಕ್ಕೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶಾಂತವೀರ ಶಿವಪ್ಪ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ನೆರವೇರಿಸಲಿರುವರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ|| ವಿದ್ಯಾ ಕುಮಾರಿ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ, ಶ್ರೀ ಪ್ರಸನ್ನ. ಹೆಚ್. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್ ಉಡುಪಿ, ಶ್ರೀಮತಿ ಶರ್ಮಿಳಾ
ಎಸ್. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಡಾ|| ನಾಗಭೂಷಣ ಉಡುಪ ಹೆಚ್. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಉಡುಪಿ, ಡಾ|| ವೀಣಾ ಕುಮಾರಿ ಜಿಲ್ಲಾ ಸರ್ಜನ್, ಜಿಲ್ಲಾ ಆಸ್ಪತ್ರೆ, ಉಡುಪಿ, ಡಾ|| ನಾಗರತ್ನ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಉಡುಪಿ ಭಾಗವಹಿಸಲಿರುವರು. “ರಕ್ತದಾನ ಶ್ರೇಷ್ಠದಾನ, ರಕ್ತದಾನ ಮಾಡಿ ಜೀವ ಉಳಿಸಿ”.
ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಈ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನ ಮಾಡಬೇಕಾಗಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ|| ಜಿ. ಎಸ್.ಚಂದ್ರಶೇಖರ್ ಹಾಗೂ ಬಸವ ಸಮಿತಿ, ಉಡುಪಿ ಇದರ ಅಧ್ಯಕ್ಷರಾದ ಶ್ರೀ ಡಿ.ಜಿ. ಗಂಗಾಧರ ವಿನಂತಿಸಿಕೊಂಡಿದ್ದಾರೆ.
 
 
 
 
 
 
 
 
 
 
 

Leave a Reply