ಜನನ ಮರಣ ತಂತ್ರಾoಶದಲ್ಲಿ ನಿಖರ ಮಾಹಿತಿ ದಾಖಲಿಸಿ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

ಉಡುಪಿ:  ಜನನ- ಮರಣ ದಾಖಲೆಗಳನ್ನು ತಂತ್ರಾoಶದಲ್ಲಿ ದಾಖಲಿಸುವ ಸಂದರ್ಭದಲ್ಲಿ ಮಾಹಿತಿಗಳನ್ನು ಪೂರ್ಣವಾಗಿ ಪರಿಶೀಲಿಸಿ, ನಿಖರವಾದ ಮಾಹಿತಿ ಅಳವಡಿಸುವುದರೊಂದಿಗೆ ತಿದ್ದುಪಡಿಗಳನ್ನು ಸಾಧ್ಯವಾದಷ್ಟು ಕಡಿಮೆಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಸೂಚಿಸಿದರು.
ಅವರು ಶುಕ್ರವಾರ ಅಪರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮರಣ ನೋಂದಣಿ ಕುರಿತ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇ-ಜನ್ಮ ತಂತ್ರಾoಶದಲ್ಲಿ ಜನನ ಮತ್ತು ಮರಣ ಘಟನೆಗಳ ನೋಂದಣಿ ಮಾಡುವುದು ಕಡ್ಡಾಯವಾಗಿದ್ದು, ಘಟನೆಗಳನ್ನು ದಾಖಲಿಸಿ, ನೋಂದಣಾಧಿಕಾರಿಗಳು ಡಿಜಿಟಲ್ ಕೀ ಮೂಲಕ ನೋಂದಣಿಯನ್ನು ಅಂಗೀಕರಿ ಸಲಾಗುತ್ತಿದ್ದು, ಈ ಕುರಿತ ಪ್ರಗತಿಯನ್ನು ಅಪರ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.

2015 ರಿಂದ ಇ-ಜನ್ಮ ತಂತ್ರಾoಶದಲ್ಲಿ ಜನನ ಮರಣ ಘಟನೆ ದಾಖಲಾಗುತ್ತಿದ್ದು, ಅದಕ್ಕಿಂತ ಹಿಂದಿನ ದಾಖಲೆಗಳನ್ನು ಸಹ ತಂತ್ರಾoಶದಲ್ಲಿ ಕೇಂದ್ರೀಕರಿಸಲು ಪ್ರಸ್ತುತ ಕ್ರಮವಹಿಸಲಾಗುತ್ತಿದೆ. ಈ ಡಿಜಿಟಲೀಕರಣ ಕಾರ್ಯವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಾಧಾಕೃಷ್ಣ ಅಡಿಗ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply