ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯಲ್ಲಿ ಬಂದು ಕಸ ಎಸೆದವರಿಗೆ ಅಪರ ಜಿಲ್ಲಾಧಿಕಾರಿ ಕ್ಲಾಸ್

ಉಡುಪಿ : ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಕರಾವಳಿ ಜಂಕ್ಷನ್‌ ನಿಂದ ಕುಂದಾಪುರ / ಮಂಗಳೂರು ಹೆದ್ದಾರಿ ಬದಿಯ ಎರಡೂ ಪಾರ್ಶ್ವದಲ್ಲಿ ಎಸೆಯಲಾಗಿದ್ದ ಕಸವನ್ನು ಫೆಬ್ರವರಿ 13 ರಂದು ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದೊಂದಿಗೆ ತೆರವುಗೊಳಿಸಿ ಸ್ವಚ್ಛ ಗೊಳಿಸಲಾಗಿದ್ದು, ನಂತರದಲ್ಲಿ ನಿರಂತರ ವಾಗಿ ಸದ್ರಿ ಪ್ರದೇಶಗಳಲ್ಲಿ ಆಗಾಗ್ಗೆ ತಪಾಸಣೆ ನಡೆಸಿ, ಕಸ ಎಸೆಯುವವರಿಗೆ ದಂಡ ವಿಧಿಸಲಾಗಿತ್ತು.

ಆದರೆ ಅಲ್ಲಲ್ಲಿ ಕಸ ಎಸೆಯುವ ಪ್ರಕ್ರಿಯೆ ಮುಂದುವರೆದಿದ್ದು, ಇಂದು ಉಡುಪಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಶಶಿರೇಖಾ ಮತ್ತು ಸಿಬ್ಬಂದಿಯವರು ನಿಟ್ಟೂರಿನ ಆಭರಣ ಮೋಟಾರ್ ಸಮೀಪದ ರಾಷ್ಟ್ರೀಯ ಹೆದ್ದಾರಿ ಬಳಿ ಲಾರಿಯಲ್ಲಿ ಬಂದು ತ್ಯಾಜ್ಯ ಎಸೆಯುತ್ತಿರುವವರನ್ನು ಹಿಡಿದು, ಲಾರಿಯನ್ನು ತಡೆದು ನಿಲ್ಲಿಸಿ, ಚಾಲಕನಿಗೆ ದಂಡ ವಿಧಿಸಿದರು.

ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಸ ಎಸೆದ ಲಾರಿ ಚಾಲಕನನ್ನು ತರಾಟೆಗೆ ತೆಗೆದು ಕೊಂಡು, ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಬದಿಯಲ್ಲಿ ಕಸ/ ತ್ಯಾಜ್ಯವನ್ನು ಎಸೆಯುವ ವರ ಮೇಲೆ ಹೆಚ್ಚಿನ ನಿಗಾ ವಹಿಸಿ, ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಗರಸಭೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು.

 
 
 
 
 
 
 
 
 
 
 

Leave a Reply