ಆಗುಂಬೆ ಘಾಟಿಯಲ್ಲಿ ತ್ಯಾಜ್ಯ ಸಂಗ್ರಹಿಸಿ ​ಸ್ವಚ್ಛ ಭಾರತ ಪರಿಕಲ್ಪನೆಗೆ ​ಮಾದರಿಯಾದ ಅಧಿಕಾರಿಗಳು

​ಉಡುಪಿ​: ​ ಶನಿವಾರ ಹೆಬ್ರಿ ತಾಲೂಕಿನ ಕಬ್ಬಿನಾಲೆ ಮತ್ತು ನಾಡ್ಪಾಲು ನಲ್ಲಿ ನಡೆದ​ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕರ ಸಮಸ್ಯೆಗಳ ಕುರಿತು ಅಹವಾಲು ಗಳನ್ನು​ ಸ್ವೀಕರಿಸಿ, ಸೋಮೇಶ್ವರದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿದ್ದ ಅಧಿಕಾರಿಗಳ ತಂಡ, ಬೆಳಗಿನ ವಾಯು​ ವಿಹಾರ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದ ಕಸ ಸಂಗ್ರಹಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ​ ಮಾದರಿಯಾಗಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರೊಂದಿಗೆ ಸೋಮೇಶ್ವರದಿಂದ ಆಗುಂಬೆ ಕಡೆಗೆ ಬೆಳಗಿನ ವಾಯು ವಿಹಾರ​ ಹೊರಟ ಅಧಿಕಾರಿಗಳಾದ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ,​ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್, ಭೂ ದಾಖಲೆಗಳ ಉಪ ನಿರ್ದೇಶಕ ರವೀಂದ್ರ,
ಹೆಬ್ರಿ ತಹಸೀಲ್ದಾರ್ ಪುರಂದರ,ರಸ್ತೆಯ ಎರಡೂ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಗಾಜಿನ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಸೇರಿದಂತೆ​ ಮತ್ತಿತರ ಕಸವನ್ನು ಕಂಡು ಅದನ್ನು ಸ್ವಚ್ಛಗೊಳಿಸಲು ನಿರ್ಧರಿಸಿ, ಆಗುಂಬೆ ಘಾಟ್ ನ 14 ನೇ ತಿರುವಿನಲ್ಲಿ ಸುಮಾರು 200​ ಮೀ ವರೆಗಿನ ರಸ್ತೆಯಲ್ಲಿ, ಪ್ರವಾಸಿಗರು ಮತ್ತು ಸಾರ್ವಜನಿಕರು ಎಸೆದಿದ್ದ 5 ಚೀಲಕ್ಕೂ ಹೆಚ್ಚಿನ ಕಸವನ್ನು ಸಂಗ್ರಹಿಸಿ ಸೂಕ್ತ​ ರೀತಿಯಲ್ಲಿ ವಿಲೇವಾರಿ ಮಾಡುವುದರ ಮೂಲಕ ಆಗುಂಭೆ ಘಾಟ್ ನಲ್ಲಿ ಪರಿಸರ ಸ್ವಚ್ಛತೆಗೆ ಕಾರಣರಾದರು.

ಪ್ರವಾಸಿಗರು ಮತ್ತು ಸಾರ್ವಜನಿಕರು ಆಗುಂಬೆ ಘಾಟ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತಿತರ ಕಸ ಬಿಸಾಡುವುದರಿಂದ , ಪಶ್ಚಿಮ​ ಘಟ್ಟದ ಸೂ​ಕ್ಷ್ಮ ಪ್ರದೇಶವಾದ ಇಲ್ಲಿ ಮಾಲಿನ್ಯ ಉಂಟಾಗುವುದರ ಜೊತೆಗೆ ವಿವಿಧ ಕಾಡುಪ್ರಾಣಿಗಳ ಆರೋಗ್ಯಕ್ಕೂ ಸಹ​ ತೊಂದರೆಯಾಗಲಿದ್ದು, ರಸ್ತೆ ಬದಿಯಲ್ಲಿ ಕಸ ಬಿಸಾಡದಂತೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ವಿನಂತಿ ಮಾಡಿದ್ದಾರೆ.​​
 
 
 
 
 
 
 
 
 
 
 

Leave a Reply