ಆಗುಂಬೆ ಘಾಟ್‌ ನಲ್ಲಿ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ತ್ರಿಶಂಕು ಸ್ಥಿತಿಯಲ್ಲಿ 

ಉಡುಪಿ  : ಶಿವಮೊಗ್ಗ ಉಡುಪಿ ಸಂಪರ್ಕಿಸುವ ಆಗುಂಬೆ ಘಾಟ್‌ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಲಾರಿ ಪ್ರಪಾತದತ್ತ ಮುಖ ಮಾಡಿ ನಿಂತಿದೆ. ಅದೃಷ್ಟವಶಾತ್ ದೊಡ್ಡ ಅಪಾಯ ತಪ್ಪಿದಂತಾಗಿದೆ.

ಗುರುವಾರ ಆಗುಂಬೆ ಘಾಟ್‌ ರಸ್ತೆಯ 6 ಮತ್ತು 7ನೇ ತಿರುವಿನ ಮಧ್ಯೆ ಈ ಘಟನೆ ಸಂಭವಿಸಿದೆ. ಭತ್ತ ತುಂಬಿದ್ದ ಲಾರಿ ಶಿವಮೊಗ್ಗದಿಂದ ಹೆಬ್ರಿಗೆ ತೆರಳುತಿತ್ತು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಮುನ್ನುಗ್ಗಿದೆ. ತಡೆಗೋಡೆಯ ಕಲ್ಲುಗಳು ಲಾರಿಯ ಛಾಸಿಗೆ ತಾಗಿದ್ದರಿಂದ ಲಾರಿ ನಿಂತಿದೆ. ಕ್ಯಾಂಟರ್‌ ನಲ್ಲಿ ಭತ್ತದ ಲೋಡ್ ಇದ್ದಿದ್ದರಿಂದ ಲಾರಿ ಪ್ರಪಾತಕ್ಕೆ ಧುಮುಕದೆ ನಿಂತಿದೆ. ಲಾರಿಯ ಚಾಲಕನ್ನು ರಕ್ಷಣೆ ಮಾಡಲಾಗಿದೆ.

ಅಪಘಾತದಿಂದಾಗಿ ಕೆಲಕಾಲ ಘಾಟಿಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply