ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕ್ರೀಡಾಪಟು ಬೋಳ ಅಕ್ಷತಾ ಪೂಜಾರಿ ಅವರಿಗೆ ಸನ್ಮಾನ

ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರ ವತಿಯಿಂದ ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಕ್ರೀಡಾಪಟು ಬೋಳ ಅಕ್ಷತಾ ಪೂಜಾರಿ ಅವರನ್ನು ಸಾಣೂರಿನಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸ್ಪರ್ದಿಸಿ ದೇಶಕ್ಕೆ ಪ್ರಶಸ್ತಿ ಪುರಸ್ಕಾರಗಳನ್ನು ತಂದು ಕಾರ್ಕಳ ತಾಲೂಕಿನ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ಕೀರ್ತಿ ಕುಮಾರಿ ಅಕ್ಷತಾ ಪೂಜಾರಿ ಬೋಳ ಇವರಿಗೆ ಸಲ್ಲುತ್ತದೆ ಇವರು ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆಗೆ ಸಾಣೂರಿಗೆ ಆಗಮಿಸಿದ್ದರು ಯುವಕ ಮಂಡಲದ ಉಪಾಧ್ಯಕ್ಷರಾದ ಶ್ರೀ ಪ್ರಸಾದ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿ ಸಾಧಕರ ಸಾಧನೆಯನ್ನು ಪರಿಚಯಿಸಿದರು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಧಿಕಾರಿ ಶ್ರೀ ವಿಲ್ಲ್ ಫ್ರೆಡ್ ಡಿ ಸೋಜಾ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ, ಕಾರ್ಯದರ್ಶಿ ಶ್ರೀ ಮೋಹನ್ ಶೆಟ್ಟಿ ಕೋಶಾಧಿಕಾರಿ ಶ್ರೀ ರಾಜೇಶ್ ಪೂಜಾರಿ ಕ್ರೀಡಾ ಕಾರ್ಯದರ್ಶಿ ಶ್ರೀ ರೋಹಿತ್ ಆರ್.ಕೆ ಮಾಜಿ ಅಧ್ಯಕ್ಷರುಗಳಾದ ಶ್ರೀ ಮಹೇಶ್ ಕುಮಾರ್ ಶ್ರೀ ಜಗದೀಶ್ ಕುಮಾರ್ ಶ್ರೀ ಶಂಕರ್ ಶೆಟ್ಟಿ ಕೋಲ್ಡ್ರೋಟ್ಟು ಹಿರಿಯರಾದ ಶ್ರೀ ರಮೇಶ್ ಶೆಟ್ಟಿ ಮುದೆಲಾಡಿ ಮನೆ, ಶ್ರೀ ಯುವರಾಜ್ ಜೈನ್, ಕ್ರಿಸ್ಪಿನ್ ಜೆರಾಲ್ಡ್ ಕ್ರಾಸ್ತ ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಜಾತ ಶೆಟ್ಟಿ ಯುವಕ ಮಂಡಲದ ಪದಾಧಿಕಾರಿಗಳಾದ ಶ್ರೀ ಜಯನ್ ಶೆಟ್ಟಿ,ಪ್ರಸನ್ನ ಆಚಾರ್ಯ, ಶ್ರೀ ಸುದರ್ಶನ್ ನಾಯ್ಕ್, ಶ್ರೀ ಪ್ರಶಾಂತ್ ಆಚಾರ್ಯ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply