ಕೋಟ-ಅಮೃತ್ ಯುವಕ ಸಂಘದ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

ಕೋಟ: ಅಮೃತ್ ಯುವಕ ಸಂಘ ಕದ್ರಿಕಟ್ಟು ಕೋಟ ಇದರ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಶನಿವಾರ ನಡೆಯಿತು.

ಕಾರ್ಯಕ್ರಮವನ್ನು ಕೋಟ ಪಡುಕರೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅಭ್ಯಾಗತರಾಗಿ ಮಣೂರು ಮಹಾಲಿಂಗೇಶ್ವರ ದೇವಳದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ಉದ್ಯಮಿ ಸದಾನಂದ ಪೂಜಾರಿ,ಅಮೃತ್ ಯುವಕ ಸಂಘದ ಅಧ್ಯಕ್ಷ ಜಗನಾಥ ಕಾಂಚನ್,ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಸ್ಥಳೀಯರಾದ ವಿಠ್ಠಲ್ ಪೂಜಾರಿ ಕದ್ರಿಕಟ್ಟು,ಕೋಟ ಗ್ರಾಮಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ ಕದ್ರಿಕಟ್ಟು,ಚಂದ್ರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಅಗಲಿದ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ಪುನೀತ್ ರಾಜಕುಮಾರ್ ನುಡಿನಮನ ಸಲ್ಲಿಸಲಾಯಿತು.ಕಾರ್ಯಕ್ರಮವನ್ನು ರವಿಕಿರಣ್ ಕೋಟ ನಿರೂಪಿಸಿ ವಂದಿಸಿದರು.ಅಮೃತ್ ಯುವಕ ಸಂಘದ ಜೀವನ್ ಪೂಜಾರಿ ಸಹಕರಿಸಿದರು.

ಅಮೃತ್ ಯುವಕ ಸಂಘ ಕದ್ರಿಕಟ್ಟು ಕೋಟ ಇದರ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ಕೋಟ ಪಡುಕರೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು. ಮಣೂರು ಮಹಾಲಿಂಗೇಶ್ವರ ದೇವಳದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ,ಉದ್ಯಮಿ ಸದಾನಂದ ಪೂಜಾರಿ,ಅಮೃತ್ ಯುವಕ ಸಂಘದ ಅಧ್ಯಕ್ಷ ಜಗನಾಥ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply