ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಮೃತ್ ಯೋಜನೆಯಡಿ ಜಿ.ಐ.ಎಸ್. ಬೆಸ್ಡ್ ಮಹಾಯೋಜನೆಯ ತಯಾರಿಸುವ ಸಂಭಂದ ಪ್ರಗತಿ ಪರಿಶೀಲನಾ ಸಭೆ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಮೃತ್ ಯೋಜನೆಯಡಿ ಜಿ.ಐ.ಎಸ್. ಬೆಸ್ಡ್ ಮಹಾಯೋಜನೆ (ಉಡುಪಿ ನಗರಸಭೆ ವ್ಯಾಪ್ತಿಯ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಒಳಪಡುವ ಮೂಲ ನಕ್ಷೆ ತಯಾರಿಕೆ) ತಯಾರಿಸುವ ಕುರಿತು ಪಿ.ಪಿ.ಟಿ. ಮೂಲಕ ಪ್ರಸ್ತುತ ಪಡಿಸಿದ್ದು, ಈ ಬಗ್ಗೆ ಇಂದು ದಿನಾಂಕ 22-04-2022 ರಂದು ಉಡುಪಿ ನಗರ ಸಭೆಯಲ್ಲಿ ಆಯೋಜಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಮತ್ತು ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ನಗರ ಯೋಜನಾ ಸದಸ್ಯರಾದ ಧರ್ಮೇಂದ್ರ, ಹಾಗೂ ಬಿಲ್ಡರ್ಸ್ ಅಸೋಸಿಯೇಷನ್ ನವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply