ಬಡಗುತಿಟ್ಟಿನ ಹಿರಿಯ ವೇಷಧಾರಿಗಳಾದ ಮಜ್ಜಿಗೆಬೈಲು ಆನಂದ ಶೆಟ್ಟಿ ನಿಧನ

ಬಡಗುತಿಟ್ಟಿನ ಹಿರಿಯ ವೇಷಧಾರಿಗಳಾದ ಮಜ್ಜಿಗೆಬೈಲು ಆನಂದ ಶೆಟ್ಟಿ(78ವರ್ಷ)ಇಂದು (10-7-2022)ಕುಂದಾಪುರ ತಾಲೂಕಿನ ಯಡಾಡಿಯ ಸ್ವಗೃಹದಲ್ಲಿ ರಾತ್ರಿ7.37ಕ್ಕೆ ನಿಧನರಾದರು. ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ ವೇಷಧಾರಿಯಾಗಿ ಕಲಾರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಪೆರ್ಡೂರು,ಮಾರಣಕಟ್ಟೆ,ಸಾಲಿಗ್ರಾಮ,ಗೂಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳದಲ್ಲಿ ಹೀಗೆ ನಾಲ್ಕು ದಶಕಗಳ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು.ಯಕ್ಷಗಾನ ಕಲಾರಂಗ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು.ಪತ್ನಿ ,ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.ಇವರ ನಿಧನಕ್ಕೆ ಯಕ್ಷಗಾನ ಕಲಾರಂಗ ತೀವ್ರ ಸಂತಾಪ ವ್ಯಕ್ತಪಡಿಸಿದೆ.

 
 
 
 
 
 
 
 
 
 
 

Leave a Reply