ಸರ್ಕಾರಿ ಸಂಸ್ಥೆಗಳ ದುರುಪಯೋಗ ಮಾಡಿ ಜನರನ್ನು ವಂಚಿಸುತ್ತಿರುವ ಕೇಂದ್ರ ಸರ್ಕಾರ: ನ್ಯಾಯಾಂಗ ಮಧ್ಯೆ ಪ್ರವೇಶಿಸಲಿ

ಉಡುಪಿ: ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದಿ ಧೋರಣೆಯಿಂದ ಪಕ್ಷಪಾತೀಯ ನಿಲುವು ತಾಳಿ ಪಿ ಎಫ್ ಐ ಸಂಘಟನೆ ಹಾಗೂ ರಾಜಕೀಯ ಪಕ್ಷವಾಗಿರುವ ಎಸ್ಡಿಪಿಐ ಯ ನಾಯಕರುಗಳ ಬಂಧನ ಮಾಡಿ ಈ ದೇಶದ ಸಂವಿಧಾನಕ್ಕೆ ಅಪಚಾರವೆಸಗುವ ಕೆಲಸವನ್ನು ಇಂದು ಕೇಂದ್ರ ಸರ್ಕಾರ ಮಾಡುತ್ತಿರುವುದು ಖಂಡನೀಯವಾಗಿದೆ.

ಯಾವುದೇ ತನಿಖೆ ನಡೆಸಿ ಸೂಕ್ತ ಸಾಕ್ಷ್ಯಧಾರ ಇಲ್ಲದೆ ಸುಮ್ಮನೆ ಬಂಧನ ಮಾಡಿರುವುದು ಈ ದೇಶದ ಕಾನೂನು ವ್ಯವಸ್ಥೆಗೆ ಮಾಡಿರುವ ಅಪಚಾರವಾಗಿದೆ. ಇದೇ ರೀತಿ ಮುಂದುವರೆದರೆ ಈ ದೇಶದ ಸಾಂವಿಧಾನಿಕ ಸಂಸ್ಥೆಗಳಿಗೆ ಯಾವುದೇ ರೀತಿಯ ಮೌಲ್ಯವಿಲ್ಲದೆ, ರಾಜಕೀಯದ ಗೂಂಡಾಯಿಸಂನ ಬಲಿಪಶು ಆಗುವುದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲದಂತಾಗಲಿದೆ. ಯಾವುದೇ ಸಂಘಟನೆ – ಪಕ್ಷಗಳಾದರೂ ಅದಕ್ಕೆ ತನ್ನದೇ ಆದ ನಿಲುವು ಇದ್ದು ಅದರ ಬಗ್ಗೆ ಭಿನ್ನಾಭಿಪ್ರಾಯಗಳು ಸರ್ವೇ ಸಾಮಾನ್ಯ. ಆ ಕಾರಣಕ್ಕೆ ಸಾಂವಿಧಾನಿಕ ಸಂಘಟನಾ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಭಾರತದ ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅಪಮಾನ. ಆದ್ದರಿಂದ ಇಂತಹ ಅರಾಜಕತೆಯನ್ನು ತಕ್ಷಣ ನಿಲ್ಲಿಸಬೇಕೆಂದು ಎಪಿಸಿಆರ್ ನ ಉಡುಪಿ ಜಿಲ್ಲಾ ಘಟಕ ಆಗ್ರಹಿಸುತ್ತದೆ.

 
 
 
 
 
 
 
 
 
 
 

Leave a Reply