ಯಡವಟ್ಟು ಮಾಡಿಕೊಂಡ ಅರಗ : ಪಿಸ್ತೂಲ್ ಹಿಡಿದು ಫೋಸ್ ಕೊಟ್ಟ ಗ್ರಹ ಸಚಿವ

ಮೈಸೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತೊಂದು ಯಡವಟ್ಟು ಮಾಡಿದ್ದಾರೆ. ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಪೊಲೀಸ್ ಇಲಾಖೆಯ ತರಬೇತಿ ಸೆಂಟರ್ ನಲ್ಲಿ ಪಿಸ್ತೂಲ್ ಹಿಡಿದುಕೊಂಡು ಕೊಟ್ಟಿರುವ ಫೋಸ್ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ ಗೆ ಪ್ರಯತ್ನಿಸುತ್ತಿದ್ದಾರೆ ಎಂಬ ಮಾತು ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ವಿದ್ಯಾರ್ಥಿನಿಯು ತನ್ನ ಸ್ನೇಹಿತನ ಜೊತೆಗೆ ಅಲ್ಲಿಗೆ ಹೋಗಬಾರದಿತ್ತು ಎಂಬ ಹೇಳಿಕೆ ಕೊಟ್ಟು ಸಾಕಷ್ಟು ಮುಜುಗರ ಅನುಭವಿಸಿದ್ದರು.

 
ಇದಕ್ಕೆ ವಿಷಾದದ ಜೊತೆಗೆ ಹೇಳಿಕೆ ವಾಪಸ್ ಪಡೆಯುತ್ತೇನೆ ಎಂದಿದ್ದರು. ಆದ್ರೆ, ಈಗ ಪಿಸ್ತೂಲ್ ಹಿಡಿದು ಟೈಂ ಪಾಸ್ ಮಾಡುವ ಮೂಲಕ ರೇಪ್ ಕೇಸ್ ಬಗ್ಗೆ ಅಷ್ಟೇನೂ ಗಂಭೀರವಾಗಿ ಪರಿಗಣಿಸಿಲ್ಲ ಎಂಬ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ.
 
 
 
 
 
 
 
 
 
 
 

Leave a Reply