ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಗಳಿಗೆ ಅಭಿನಂದನೆ

ಮೂಲತಃ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿದ್ದು, ಉಡುಪಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿರುವ ನ್ಯಾಯಮೂರ್ತಿ ಶ್ರೀ ಅರವಿಂದ ಕುಮಾರ್ ಇವರು ಅಕ್ಟೋಬರ್ 2021ರಲ್ಲಿ ಗುಜರಾತ್ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯ ಮೂರ್ತಿಗಳಾಗಿ ನೇಮಕಾತಿಗೊಂಡಿದ್ದು,ಇದೀಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ಹೊಂದಿದ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶ್ರೀ ಡಿ.ವೈ. ಚಂದ್ರಚೂಡ್ ಇಂದು ಫೆಬ್ರವರಿ ತಾ. 13ರಂದು ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಪುಷ್ಪಗುಚ್ಚ ನೀಡಿ ಉಡುಪಿ ವಕೀಲರ ಸಂಘದ ವತಿಯಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ಬಿ. ನಾಗರಾಜ್, ಪ್ರಧಾನ ಕಾರ್ಯದರ್ಶಿ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಶ್ರೀ ಟಿ. ವಿಜಯ ಕುಮಾರ್ ಶೆಟ್ಟಿ, ಹಿರಿಯ ವಕೀಲರುಗಳಾದ ಶ್ರೀ ಆನಂದ ಮಡಿವಾಳ, ಶ್ರೀ ರಾಘವೇಂದ್ರ ಶೆಟ್ಟಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply