ನುಡಿದಂತೆ ನಡೆದ ಮುಂಬೈ ಪೊಲೀಸರು- ಖ್ಯಾತ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ

ಮುಂಬೈ: ಬುಧವಾರ  ಮುಂಬೈಯಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳ್ಳಂ ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಸುಶಾಂತ್ ಕೊಲೆ ಕೇಸಿನ ವಿಚಾರದಲ್ಲಿ ಸರಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದ ಗೋಸ್ವಾಮಿಯನ್ನು ಮುಂಬಯಿ ಪೊಲೀಸರು ಕಣ್ಣಿಟ್ಟಿದ್ದರು. ನಿರೀಕ್ಷಿಸಿದಂತೆ ಇಂದು ಬಂಧನ ಮಾಡಿರುತ್ತಾರೆ.

 
 
 
 
 
 
 
 
 
 
 

Leave a Reply