ಆರೋಗ್ಯ ಬಗ್ಗೆ ಗಮನವಿರಬೇಕು : ಸಚಿವ ಸುನಿಲ್ ಕುಮಾರ್

 ಉಡುಪಿ: ಆರೋಗ್ಯದ ಬಗ್ಗೆ ಯುವಕರಾದಿಯಾಗಿ ಯಾರೂ ನಿರ್ಲಕ್ಷೃ ವಹಿಸದೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಬೇಕು ಎಂದು  ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಭಾನುವಾರ ಆದರ್ಶ ಆಸ್ಪತ್ರೆಯಲ್ಲಿ ಆದರ್ಶ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ  ಉಡುಪಿ ತಾಲೂಕಿನ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
 
ಪ್ರಸ್ತಾವಿಕ ಮಾತನಾಡಿದ ಆದರ್ಶ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಜಿ. ಎಸ್. ಚಂದ್ರಶೇಖರ್,ನಿತ್ಯ ವ್ಯಾಯಾಮ, ಉತ್ತಮ ಆಹಾರ ಸೇವನೆಯಿಂದ ಮಧುಮೇಹ ದೂರ ಇಡಬಹುದು ಎಂದರು.
ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಜಿ.ಪಂ. ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಹಿರಿಯ ನರರೋಗ ತಜ್ಞ ಡಾ. ಎ. ರಾಜಾ ಉಪಸ್ಥಿತರಿದ್ದರು.
 
 
 
 
 
 
 
 
 
 
 

Leave a Reply