ಅಸಲಿ ಪೊಲೀಸರಿಂದ ನಕಲಿ ಪೊಲೀಸರ ಬಂಧನ..!

ರಾಮನಗರ : ‌ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ನಿಲ್ಲಿಸಿ, ‘ನಿಮ್ಮ ಡಿಎಲ್ ಕೊಡಿ, ಆರ್‌ಸಿ ಕೊಡಿ’ ಅಂತಾ ಸಾರ್ವಜನಿಕರನ್ನು ಬೆದರಿಸಿ ಹಗಲು ದರೋಡೆ ನಡೆಸುತ್ತಿದ್ದ ನಕಲಿ ಪೊಲೀಸರನ್ನು ಅಸಲಿ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕುದೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ರಾಜೇಶ್(33), ಚೇತನ್(35), ಪುನೀತ್ ಕುಮಾರ್(24) ಹಾಗೂ ಶ್ರೀನಿವಾಸ್(24) ಬಂಧಿತ ಆರೋಪಿಗಳಾಗಿದ್ದಾರೆ.

ಈ ನಕಲಿ‌ ಪೊಲೀಸರು ಬಿಡದಿ, ಕುದೂರು ಭಾಗದಲ್ಲಿ ಓಡಾಡುವ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಈ ಕಳ್ಳರು ಕದ್ದ ಇನೋವಾ ಕಾರಿನಲ್ಲೇ, ಕಳ್ಳತನ ಹಾಗೂ ಸುಲಿಗೆ ಮಾಡುತ್ತಿದ್ದರು.  ಹೆದ್ದಾರಿಗಳಲ್ಲಿ ಒಬ್ಬೊಂಟಿಯಾಗಿ ಓಡಾಡುವ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದರು ಎನ್ನಲಾಗಿದೆ‌. 

ಈ ಗ್ಯಾಂಗ್ ನಡೆ ಬಗ್ಗೆ ಅನುಮಾನಗೊಂಡು ಬೆನ್ನು ಹತ್ತಿದ್ದ ಪೊಲೀಸರಿಗೆ ಕುಣಿಗಲ್ ಟೋಲ್ ಬಳಿ ಕಾರು ಪತ್ತೆಯಾಗಿದೆ. ಟೋಲ್ ಬಳಿ ರಾಜೇಶ್ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು, ತೀವ್ರ ವಿಚಾರಣೆ ನಡೆಸಿ ಉಳಿದ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು. 

 
 
 
 
 
 
 
 
 
 
 

Leave a Reply