ಸಮಾವೇಶದ ಉದ್ಘಾಟನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ನಾಗಭೂಷಣ್ ಉಡುಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಶರ್ಮಿಳಾ,ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ AIUTUC ಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಡಿ.ನಾಗಲಕ್ಷ್ಮಿ , AIUTUC ರಾಜ್ಯ ಉಪಾಧ್ಯಕ್ಷರಾದ ಕಾ. ಕೆ ವಿ.ಭಟ್ ರವರು ನೆರವೇರಿಸಿದರು.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ AIUTUC ಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಡಿ.ನಾಗಲಕ್ಷ್ಮಿ ಅವರು ಮಾತನಾಡುತ್ತಾ- ಹಲವು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತಾ, ಎಲ್ಲಾ ರೀತಿಯ ಅನ್ಯಾಯದ ವಿರುದ್ಧ ಸಂಘಟಿತ ಹೋರಾಟ ಒಂದೇ ಪರಿಹಾರ ಮಾರ್ಗ ಎಂದು ಆಶಾ ಕಾರ್ಯಕರ್ತೆಯರು ಸಮಸ್ಯೆಗಳ ಪರಿಹಾರಕ್ಕೆ ಸಂಘವನ್ನು ಗಟ್ಟಿಕೊಳಿಸುತ್ತಾ ಪ್ರಭಲ ಹೋರಾಟಕ್ಕೆ ಮುಂದಾಗುವಂತೆ ಹುರಿದುಂಬಿಸಿ ಮಾತನಾಡಿದರು. ಸಂಘದ ಜಿಲ್ಲಾ ಇನ್ ಚಾರ್ಜ್ ಹರಿಣಿ, ವಿವಿಧ ಜಿಲ್ಲಾ ಮುಖಂಡರು ವೇದಿಕೆಯಲ್ಲಿ ಇದ್ದರು.