ಉಡುಪಿ ಜಿಲ್ಲೆಯಾದ್ಯಂತ ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್

 ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಆಗಸ್ಟ್ 14 ರಂದು ಬೆಳಿಗ್ಗೆ 10.30 ರಿಂದ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದೆ. ರಾಜೀ ಮಾಡಿ ಇತ್ಯರ್ಥಪಡಿಸಬಹುದಾದ 4678 ವಿವಿಧ ಪ್ರಕರಣಗಳನ್ನು ಈಗಾಗಲೇ ಗುರುತಿಸಲಾಗಿದೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸುದೀರ್ಘ ಕಾಲದಿಂದ ಇತ್ಯರ್ಥಗೊಳ್ಳದೇ ಬಾಕಿ ಉಳಿದಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಮೆಗಾ ಲೋಕ್ ಅದಾಲತ್ ನಲ್ಲಿ ರಾಜೀ ಸಂದಾನದ ಮೂಲಕ ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಲಾಗುವುದು.

ಕಕ್ಷಿಗಾರರು ಆನ್ ಲೈನ್ / ವೀಡಿಯೋ ಕಾನ್ಪರೆನ್ಸ್ / ಎಲೆಕ್ಟ್ರಾನಿಕ್ ಮೋಡ್ / ಖುದ್ದಾಗಿ ಹಾಜರಾಗುವ ಮೂಲಕ ಅದಾಲತ್ ನಲ್ಲಿ ಭಾಗವಹಿಸಿ ವಿವಾದವನ್ನು ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ.

ಪ್ರಕರಣ ರಾಜಿಯಾದಲ್ಲಿ ಸಂಪೂರ್ಣ ನ್ಯಾಯಾಲಯದ ಶುಲ್ಕವನ್ನು ಹಿಂದಿರುಗಿಸಲಾಗುವುದು. ತ್ವರಿತ ನ್ಯಾಯ, ಸಮಯ ಹಾಗೂ ಸಂಬಂಧ ಉಳಿಸುವ ನಿಟ್ಟಿನಲ್ಲಿ ಲೋಕ್ ಅದಾಲತ್ ಆಯೋಜಿಸಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬಹುದಾಗಿದೆ. 
ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ಪ್ರಕರಣ/ ವ್ಯಾಜ್ಯವನ್ನು ರಾಜೀ ಮಾಡಿಕೊಳ್ಳಬಹುದಾಗಿದೆ.
 
 
 
 
 
 
 
 
 
 
 

Leave a Reply