ಸ್ವಾಮಿಯೇ ಶರಣಂ ಅಯ್ಯಪ್ಪ

~ಇಂದಿನಿಂದ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ..!

ಶಬರಿಮಲೆ: ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಿಂದ ಮುಚ್ಚಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಇಂದಿನಿಂದ ಭಕ್ತರಿಗೆ ಹಲವು ನಿರ್ಬಂಧಗಳೊಂದಿಗೆ 

ದರ್ಶನಕ್ಕೆ ಅವಕಾಶ ನೀಡಲಿದೆ. 
  
ಇಂದಿನಿಂದ ಜುಲೈ 21ರ ವರೆಗೆ ಭಕ್ತರಿಗೆ ಅಯ್ಯಪ್ಪಸ್ವಾಮಿಯ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದ್ದು, ದಿನಕ್ಕೆ ಐದು ಸಾವಿರ ಅಯ್ಯಪ್ಪ ಭಕ್ತರಿಗೆ ಮಾತ್ರ ಸ್ವಾಮಿಯ ದರ್ಶನವನ್ನು ಪಡೆಯಬಹುದಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ತಿಳಿಸಿದೆ. 
ಲಾಕ್ ಡೌನ್ ಬಳಿಕ ಭಕ್ತರಿಗೆ ಹಲವು ನಿಯಮಗಳನ್ನು ಹೇರಿಕೆ ಮಾಡಲಾಗಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬೇಕಾದರೆ, ಭಕ್ತರು ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿರುವ ರಿಪೋರ್ಟ್ ಇಲ್ಲವಾದರೆ 48 ಗಂಟೆಯೊಳಗೆ ಮಾಡಿಸಿದ ಆರ್‌ಟಿಪಿಸಿಆರ್‌ ರಿಪೋರ್ಟ್​ ಕಡ್ಡಾಯಗೊಳಿಸಲಾಗಿದೆ.
 
 
 
 
 
 
 
 
 
 
 

Leave a Reply