ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸಾಲ ಮನ್ನಾಕ್ಕೆ ಸಚಿವರಿಗೆ ಮನವಿ    

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಸರಕಾರದ ಸಾಲವನ್ನು ಮನ್ನಾ ಮಾಡುವಂತೆ ಇಂಧನ ಸಚಿವರಾದ ವಿ ಸುನೀಲ್ ಕುಮಾರ್ ಅವರಿಗೆ ಇಂದು ಬ್ರಹ್ಮಾವರದಲ್ಲಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಮನವಿ ಮಾಡಿದರು .

ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರದಲ್ಸಿ ಸಕ್ಕರೆ ಕಾರ್ಖಾನೆಯ ಪುನರ್ ನಿರ್ಮಾಣದ ಬಗ್ಗೆ ಜಿಲ್ಲೆಯ ಶಾಸಕರ ಸಂಸದರ ಸಭೆ ನಡೆಸುವುದಾಗಿ ಆಶ್ವಾಸನೆ ನೀಡಿದರು. 

 ಈ ಸಂದರ್ಭದಲ್ಲಿ ಉಡುಪಿಯ ಶಾಸಕರಾದ ಕೆ ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುರೇಶ್ ನಾಯಕ್ , ಕಾರ್ಖಾನೆಯ ನಿರ್ದೇಶಕ ಆಸ್ತಿಕ ಶಾಸ್ತ್ರಿ ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply