ಈ ವೇಳೆ ಬೈಕ್ ಗೆ ಬೇರೊಂದು ವಾಹನ ಡಿಕ್ಕಿ ಹೊಡೆದು ಹೊರೆಟು ಹೋಗಿದೆ. ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಾ ಕಾಪಾಡಿ ಕಾಪಾಡಿ ಎಂದು ಅಂಗಲಾಚಿದರೂ ಯಾರೊಬ್ಬ ವ್ಯಕ್ತಿಯೂ ಸಹಾಯಕ್ಕೆ ಮುಂದಾಗಿಲ್ಲ. ಕಾಲು ಮುರಿದು ಕೊಂಡು ರಕ್ತದ ಮಡುವಿನಲ್ಲಿ ಬಿದ್ದ ಯುವಕ ಹಾಗೂ ಯುವತಿಯ ಚೀರಾಟದ ವಿಡಿಯೋ ಮಾಡಿದ್ದಾರೆಯೇ ಹೊರತು ಸಹಾಯಕ್ಕೆ ಮುಂದಾಗದಿರುವುದು ಬೇಸರದ ಸಂಗತಿ..
ಇಂಡಿ ತಾಲೂಕಿನ ಬೂದಿಹಾಳ ಗ್ರಾಮದ ಸಚಿನ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ತಿಕೋಟ ಪಟ್ಟಣದ ಮಠಪತಿಗಲ್ಲಿ ನಿವಾಸಿ ಸುಜಾತಾಳಿಗೆ ಚಿಕಿತ್ಸೆ ಮುಂದುವರೆದಿದೆ. ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.