ನಿಶ್ಚಿತಾರ್ಥಕ್ಕೆ ಹಾಲ್​ ನೋಡಿ ಬರುತ್ತಿದ್ದಾಗ ಭಾರಿ ಸ್ಫೋಟ; ಜೀವನ್ಮರಣ ಹೋರಾಟದಲ್ಲಿ ಅಪ್ಪ-ಮಗಳು –

ಬೆಂಗಳೂರು: ಅದೊಂದು ದುರಂತ ಸಂಭವಿಸದೇ ಇದ್ದಿದ್ದರೆ ಮುಂದಿನ ವಾರ ಈ ಯುವತಿ ನಿಶ್ಚಿತಾರ್ಥದ ಸಂಭ್ರಮದಲ್ಲಿ ಇರುತ್ತಿದ್ದಳು. ಆದರೆ ಮಾರ್ಗಮಧ್ಯೆ ಸಂಭವಿಸಿದ ಅದೊಂದು ಸ್ಫೋಟ ಆಕೆಯ ಖುಷಿಗೇ ಬೆಂಕಿ ಇಟ್ಟಿದ್ದು, ಅಪ್ಪ-ಮಗಳು ಇಬ್ಬರೂ ಜೀವನ್ಮರಣ ಹೋರಾಟ ನಡೆಸುವಂತಾಗಿದೆ.

ನಿಶ್ಚಿತಾರ್ಥಕ್ಕೆ ಹಾಲ್ ಬುಕ್ ಮಾಡಿ ಬರುತ್ತಿದ್ದಾಗ ಮಾರ್ಗಮಧ್ಯೆ ವಿದ್ಯುತ್ ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡಿದ್ದು, ಶಿವರಾಜ್ ಹಾಗೂ ಅವರ ಪುತ್ರಿ ಚೈತನ್ಯ (18) ಇಬ್ಬರಿಗೂ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಇವರು ಮಂಗನಹಳ್ಳಿ ಬಳಿ ಹಂಪ್​ ಹತ್ತಿರ ವಾಹನದ ವೇಗ ತಗ್ಗಿಸಿದ ಸಂದರ್ಭದಲ್ಲೇ ಅಲ್ಲಿದ್ದ ಟ್ರಾನ್ಸ್​ಫಾರ್ಮರ್ ಸ್ಫೋಟಗೊಂಡಿದೆ. ಆಗ ಅದರಲ್ಲಿನ ಆಯಿಲ್ ಸಮೇತ ಬೆಂಕಿ ಸಿಡಿದಿದ್ದು, ಇಬ್ಬರಿಗೂ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡು ಗಾಯಗೊಂಡ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲ್ಯಾಣ ಮಂಟಪ ಬುಕ್ ಮಾಡಿ, ಒಂದಿಷ್ಟು ಬಟ್ಟೆ ಖರೀದಿಸಿಕೊಂಡು ಬರುತ್ತಿದ್ದಾಗಲೇ ಈ ದುರಂತ ಸಂಭವಿಸಿದೆ. ರಾಜಧಾನಿ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಈ ಅವಘಡಕ್ಕೆ ಬೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಸಂಬಂಧಿಕರು, ಬೆಸ್ಕಾಂ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ.

 
 
 
 
 
 
 
 
 
 
 

Leave a Reply